<p><strong>ನರಸಿಂಹರಾಜಪುರ: </strong>ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿ ಸ್ಥಾಪಿಸಿದರು ಎಂದು ಸಮಿತಿಯ ಅಧ್ಯಕ್ಷ ಕೆನಡಿ ಶಾಂತಕುಮಾರ್ ಹೇಳಿದರು.</p>.<p>ಇಲ್ಲಿನ ಲಿಟ್ಲ್ ಫ್ಲವರ್ ಚರ್ಚ್ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಿ.ಎಸ್ ಯಡಿಯೂರಪ್ಪ ಅವರ ಬದ್ಧತೆಯಿಂದ ಸಮಿತಿ ಬೆಳೆಯಲು ಕಾರಣವಾಗಿದೆ. ಆರು ತಿಂಗಳಿನಿಂದ ಪ್ರವಾಸ ಆರಂಭಿಸಿದ್ದು, 20 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಚರ್ಚ್ ಹಾಗೂ ಕ್ರೈಸ್ತ ಸಮುದಾಯದ ಸಮಸ್ಯೆಗಳ ಬಗ್ಗೆ ಧರ್ಮಗುರುಗಳೊಂದಿಗೆ ಚರ್ಚೆ ಮಾಡಲಾಗಿದೆ ಎಂದರು.</p>.<p>ಸರ್ಕಾರಿ ಸೌಲಭ್ಯಗಳನ್ನು ಸಮುದಾಯದವರು ಬಳಸಿಕೊಳ್ಳುತ್ತಿಲ್ಲ. ಸರ್ಕಾರಿ ಸವಲತ್ತು ಪಡೆಯುವಲ್ಲಿ ಕ್ರೈಸ್ತರು ಹಿಂದೆ ಬಿದ್ದಿದ್ದಾರೆ. 1983ರಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಮಾತ್ರ ಇತ್ತು. ಕ್ರೈಸ್ತ ಅಭಿವೃದ್ಧಿ ಸಮಿತಿ ಸ್ಥಾಪನೆಯಾದ ಮೇಲೆ ಅನೇಕ ಐತಿಹಾಸಿಕ ಚರ್ಚ್ಗಳ ಜೀರ್ಣೋದ್ಧಾರ ಮಾಡಲಾಗಿದೆ ಎಂದರು.</p>.<p>ಸಮುದಾಯದ ಪಂಗಡಗಳ ಮಧ್ಯೆ ವೈಚಾರಿಕ ವಿರೋಧಗಳು ಸಹಜ. ಸಮಸ್ಯೆಗಳನ್ನು ನಮ್ಮಲ್ಲಿಯೇ ಬಗೆಹರಿಸಿಕೊಳ್ಳಬೇಕು. ಧರ್ಮ ಗುರು<br />ಗಳು ಸಮುದಾಯದವರ, ಸಮಾಜದ ನಡುವಿನ ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸಬೇಕು ಎಂದರು.</p>.<p>ಮುಖಂಡ ಪಿ.ಜೆ.ಅಂಟೋಣಿ ಮಾತನಾಡಿದರು. ಲಿಟ್ಲ್ ಫ್ಲವರ್ ಚರ್ಚ್ ಧರ್ಮಗುರು ಫಾದರ್ ಥೋಮಸ್, ಚಿಕ್ಕಮಗಳೂರು ಕೆಎಂಡಿಸಿ ವ್ಯವಸ್ಥಾಪಕ ಚಂದ್ರಶೇಖರ್, ಸೇಂಟ್ ಜೋರ್ಜ್ ಚರ್ಚ್ ಧರ್ಮಗುರು ಫಾದರ್ ಜಾನ್ಸನ್, ಮುಖಂಡರಾದ ಎಂ.ಪಿ.ಸನ್ನಿ, ಈ.ಸಿ.ಜೋಯಿ, ಸಿಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ: </strong>ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿ ಸ್ಥಾಪಿಸಿದರು ಎಂದು ಸಮಿತಿಯ ಅಧ್ಯಕ್ಷ ಕೆನಡಿ ಶಾಂತಕುಮಾರ್ ಹೇಳಿದರು.</p>.<p>ಇಲ್ಲಿನ ಲಿಟ್ಲ್ ಫ್ಲವರ್ ಚರ್ಚ್ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಿ.ಎಸ್ ಯಡಿಯೂರಪ್ಪ ಅವರ ಬದ್ಧತೆಯಿಂದ ಸಮಿತಿ ಬೆಳೆಯಲು ಕಾರಣವಾಗಿದೆ. ಆರು ತಿಂಗಳಿನಿಂದ ಪ್ರವಾಸ ಆರಂಭಿಸಿದ್ದು, 20 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಚರ್ಚ್ ಹಾಗೂ ಕ್ರೈಸ್ತ ಸಮುದಾಯದ ಸಮಸ್ಯೆಗಳ ಬಗ್ಗೆ ಧರ್ಮಗುರುಗಳೊಂದಿಗೆ ಚರ್ಚೆ ಮಾಡಲಾಗಿದೆ ಎಂದರು.</p>.<p>ಸರ್ಕಾರಿ ಸೌಲಭ್ಯಗಳನ್ನು ಸಮುದಾಯದವರು ಬಳಸಿಕೊಳ್ಳುತ್ತಿಲ್ಲ. ಸರ್ಕಾರಿ ಸವಲತ್ತು ಪಡೆಯುವಲ್ಲಿ ಕ್ರೈಸ್ತರು ಹಿಂದೆ ಬಿದ್ದಿದ್ದಾರೆ. 1983ರಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಮಾತ್ರ ಇತ್ತು. ಕ್ರೈಸ್ತ ಅಭಿವೃದ್ಧಿ ಸಮಿತಿ ಸ್ಥಾಪನೆಯಾದ ಮೇಲೆ ಅನೇಕ ಐತಿಹಾಸಿಕ ಚರ್ಚ್ಗಳ ಜೀರ್ಣೋದ್ಧಾರ ಮಾಡಲಾಗಿದೆ ಎಂದರು.</p>.<p>ಸಮುದಾಯದ ಪಂಗಡಗಳ ಮಧ್ಯೆ ವೈಚಾರಿಕ ವಿರೋಧಗಳು ಸಹಜ. ಸಮಸ್ಯೆಗಳನ್ನು ನಮ್ಮಲ್ಲಿಯೇ ಬಗೆಹರಿಸಿಕೊಳ್ಳಬೇಕು. ಧರ್ಮ ಗುರು<br />ಗಳು ಸಮುದಾಯದವರ, ಸಮಾಜದ ನಡುವಿನ ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸಬೇಕು ಎಂದರು.</p>.<p>ಮುಖಂಡ ಪಿ.ಜೆ.ಅಂಟೋಣಿ ಮಾತನಾಡಿದರು. ಲಿಟ್ಲ್ ಫ್ಲವರ್ ಚರ್ಚ್ ಧರ್ಮಗುರು ಫಾದರ್ ಥೋಮಸ್, ಚಿಕ್ಕಮಗಳೂರು ಕೆಎಂಡಿಸಿ ವ್ಯವಸ್ಥಾಪಕ ಚಂದ್ರಶೇಖರ್, ಸೇಂಟ್ ಜೋರ್ಜ್ ಚರ್ಚ್ ಧರ್ಮಗುರು ಫಾದರ್ ಜಾನ್ಸನ್, ಮುಖಂಡರಾದ ಎಂ.ಪಿ.ಸನ್ನಿ, ಈ.ಸಿ.ಜೋಯಿ, ಸಿಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>