<p><strong>ನರಸಿಂಹರಾಜಪುರ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಅಹಿಂದ ಸಂಘಟನೆ ಖಂಡಿಸಿದೆ.</p>.<p>ಈ ಬಗ್ಗೆ ಹೇಳಿಕೆ ನೀಡಿ, ಹಿಂದುಳಿದ ಸಮುದಾಯಗಳ ನಾಯಕ ಸಿದ್ದರಾಮಯ್ಯ ಅವರಿಂದ ಮುಖ್ಯಮಂತ್ರಿ ಪದವಿ ಕಸಿದುಕೊಳ್ಳಬೇಕು. ರಾಜ್ಯದಲ್ಲಿನ ಬಡ ಸಮುದಾಯಗಳ ಶಕ್ತಿ ಕುಂದಿಸಬೇಕು ಎಂಬ ದುರುದ್ದೇಶದಿಂದ ಮನುವಾದಿಗಳು, ಜಾತಿವಾದಿಗಳು, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ರಾಜ್ಯಪಾಲರ ಕ್ರಮ ಸಂವಿಧಾನ, ಕಾನೂನು ಬಾಹಿರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದು ದೂರಿದ್ದಾರೆ. ರಾಜ್ಯಪಾಲರ ಈ ಕ್ರಮವನ್ನು ಅಹಿಂದ ಸಂಘಟನೆ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದೆ.</p>.<p>ಹೇಳಿಕೆಗೆ ಅಹಿಂದ ಸಂಘಟನೆಯ ರಾಜ್ಯ ಮಹಿಳಾ ಘಟಕದ ಎಂ.ವಿ.ಭವಾನಿ, ಜಿಲ್ಲಾ ಸಂಘಟನಾ ಸಂಚಾಲಕ ಎಸ್.ರಾಜೇಶ್, ರಾಜ್ಯ ಜಂಟಿ ಸಂಚಾಲಕ ತರೀಕೆರೆ ವೆಂಕಟೇಶ್, ತಾಲ್ಲೂಕು ಸಂಘಟನಾ ಸಂಚಾಲಕ ಬಿ.ಆರ್.ಸಿದ್ದಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಅಬ್ದುಲ್ ರೆಹಮಾನ್ ಸಹಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಅಹಿಂದ ಸಂಘಟನೆ ಖಂಡಿಸಿದೆ.</p>.<p>ಈ ಬಗ್ಗೆ ಹೇಳಿಕೆ ನೀಡಿ, ಹಿಂದುಳಿದ ಸಮುದಾಯಗಳ ನಾಯಕ ಸಿದ್ದರಾಮಯ್ಯ ಅವರಿಂದ ಮುಖ್ಯಮಂತ್ರಿ ಪದವಿ ಕಸಿದುಕೊಳ್ಳಬೇಕು. ರಾಜ್ಯದಲ್ಲಿನ ಬಡ ಸಮುದಾಯಗಳ ಶಕ್ತಿ ಕುಂದಿಸಬೇಕು ಎಂಬ ದುರುದ್ದೇಶದಿಂದ ಮನುವಾದಿಗಳು, ಜಾತಿವಾದಿಗಳು, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ರಾಜ್ಯಪಾಲರ ಕ್ರಮ ಸಂವಿಧಾನ, ಕಾನೂನು ಬಾಹಿರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದು ದೂರಿದ್ದಾರೆ. ರಾಜ್ಯಪಾಲರ ಈ ಕ್ರಮವನ್ನು ಅಹಿಂದ ಸಂಘಟನೆ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದೆ.</p>.<p>ಹೇಳಿಕೆಗೆ ಅಹಿಂದ ಸಂಘಟನೆಯ ರಾಜ್ಯ ಮಹಿಳಾ ಘಟಕದ ಎಂ.ವಿ.ಭವಾನಿ, ಜಿಲ್ಲಾ ಸಂಘಟನಾ ಸಂಚಾಲಕ ಎಸ್.ರಾಜೇಶ್, ರಾಜ್ಯ ಜಂಟಿ ಸಂಚಾಲಕ ತರೀಕೆರೆ ವೆಂಕಟೇಶ್, ತಾಲ್ಲೂಕು ಸಂಘಟನಾ ಸಂಚಾಲಕ ಬಿ.ಆರ್.ಸಿದ್ದಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಅಬ್ದುಲ್ ರೆಹಮಾನ್ ಸಹಿ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>