ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಇದೇ 11ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.
‘ಮಳೆಯಿಂದಾಗಿ ಈ ಮಾರ್ಗದ ಕೆಲವೆಡೆ ಗುಡ್ಡದ ಮಣ್ಣು ಕುಸಿದಿದೆ. ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು, ಎಂಜಿನಿಯರ್ಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಕಾರ್ಯಾಚರಣೆ ನಿಟ್ಟಿನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಕರಾವಳಿ ಭಾಗಕ್ಕೆ ತಲುಪಲು ಈಗ ಕೊಟ್ಟಿಗೆಹಾರ– ಕಳಸ– ಕುದುರೆಮುಖ– ಕಾರ್ಕಳ ಮಾರ್ಗ ಅಥವಾ ಶಿರಾಡಿ ಘಾಟಿ (ಸಕಲೇಶಪುರ ಬಳಿ) ಮಾರ್ಗವಾಗಿ ಸಾಗಬೇಕು.