ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಕುಸಿಯುತ್ತಿದೆ. ಕಳಸ ಭಾಗದಲ್ಲಿ ಹೆಮ್ಮಕ್ಕಿ, ಬಾಳೆಹೊಳೆ, ಗಬ್ಗಲ್, ಹಡ್ಲುಗದ್ದೆ ಸೇರಿದಂತೆ ಹಲವು ರಸ್ತೆಗಳು ನೀರಿನಿಂದ ಕೊಚ್ಚಿ ಹೋಗಿವೆ. ಶಾಲೆ ಮಕ್ಕಳಿಗೆ ಮಳೆಯಿಂದಾಗುವ ಅನಾಹುತ ತಪ್ಪಿಸಲು ಹಾಗೂ ಹಾನಿಗೊಳಗಾದ ಕುಟುಂಬಕ್ಕೆ ಪರಿಹಾರ ಒದಗಿಸುವ ಸಲುವಾಗಿ ಜಿಲ್ಲಾಧಿಕಾರಿಗಳು ಕೂಡಲೇ ಒಂದು ತಂಡ ರಚಿಸಿ ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.