ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ತೇಗೂರು ಜಗದೀಶ್ ಮಾತನಾಡಿ, ‘ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮೇಹರ್ಚಂದ್ ಮಹಾಜನ್ ಆಯೋಗ ಸ್ಥಾಪಿಸಿತ್ತು. ಆಯೋಗವು ತನಿಖೆ ನಡೆಸಿ, ಬೆಳಗಾವಿಯು ಕರ್ನಾಟಕಕ್ಕೆ ಸೇರಬೇಕು ಎಂದು ವರದಿ ನೀಡಿತ್ತು. ಮಹಾರಾಷ್ಟ್ರ ಸರ್ಕಾರ ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದೆ. ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದು, ತೀರ್ಪು ಬಾಕಿ ಇದೆ. ಕಾನೂನು ರೀತ್ಯ ಬೆಳಗಾವಿ ಪಡೆಯಲು ವಿಫಲವಾಗಿರುವ ಮಹಾರಾಷ್ಟ್ರ ಸರ್ಕಾರವು ಎಂಇಎಸ್, ಶಿವಸೇನೆ ಸಂಘಟನೆಗಳ ಮೂಲಕ ವಾಮಮಾರ್ಗ ಅನುಸರಿಸುತ್ತಿದೆ’ ಎಂದು ಆರೋಪಿಸಿದರು.