<p><strong>ಚಿಕ್ಕಮಗಳೂರು:</strong> ಕನ್ನಡದ ಕೆಲಸ ಮಾಡಲು ಜಾತಿ, ಧರ್ಮದ ಅಗತ್ಯವಿಲ್ಲ. ಕನ್ನಡಾಭಿಮಾನ ಮನಸ್ಸಿನಲ್ಲಿ ಗಟ್ಟಿಯಾಗಿ ನೆಲೆಯೂರಿರಬೇಕು. ತನು ಕನ್ನಡ, ನುಡಿ ಕನ್ನಡ ಎಂಬ ಧ್ಯೇಯದೊಂದಿಗೆ ನಾಡನ್ನು ಕಟ್ಟುವ ಕಾಯಕ ಮಾಡಬೇಕು ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಕೆಂಪನಹಳ್ಳಿ ಅಶೋಕ್ ಹೇಳಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಮಹಿಳಾ ಘಟಕದ ನೂತನ ಅಧ್ಯಕ್ಷರು ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ಭಾಷೆ ಯುವಸಮೂಹವನ್ನು ಆಕರ್ಷಿಸುತ್ತಿದೆ. ಆದರೆ, ಇಂಗ್ಲಿಷ್ ಭಾಷೆಗಿಂತ ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾಡು, ನುಡಿಯ ಏಳಿಗೆಗೆ ದಾರ್ಶನಿಕರು, ಸಂತರು, ಕವಿಶ್ರೇಷ್ಠರು ತಮ್ಮದೇ ಶೈಲಿಯಲ್ಲಿ ಕೀರ್ತನೆ, ಸಾಹಿತ್ಯದ ಮೂಲಕ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.</p>.<p>ಆಯಾ ಭಾಗದಲ್ಲಿ ಕರವೇ ಕಾರ್ಯಕರ್ತರು ಕನ್ನಡದ ಹಬ್ಬ, ಕವಿಗೋಷ್ಠಿ, ಸಾಹಿತ್ಯಾಭಿರುಚಿ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಂಡು ನಾಡಿನ ಏಕತೆಯನ್ನು ಎತ್ತಿಹಿಡಿಯಬೇಕು. ಕನ್ನಡತನಕ್ಕೆ ಧಕ್ಕೆಯಾದರೆ ಧೈರ್ಯವಾಗಿ ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.</p>.<p>ಕರವೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಗುರುಮೂರ್ತಿ ಮಾತನಾಡಿ, ಕಾರ್ಯಕರ್ತರ ಒಗ್ಗಟ್ಟು ಹಾಗೂ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಸಂಘಟನೆ ಗಟ್ಟಿಗೊಳಿಸಲಾಗುವುದು. ಕನ್ನಡಪರ ಕಾರ್ಯಕ್ರಮ ಹಮ್ಮಿಕೊಂಡು ಜನರಲ್ಲಿ ಕನ್ನಡ ಜಾಗೃತಿ ಮೂಡಿಸುವ ಕಾಯಕಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.</p>.<p><strong>ನೂತನ ಪದಗ್ರಹಣ:</strong> ಪೂರ್ಣಿಮಾ ಗುರುಮೂರ್ತಿ (ಜಿಲ್ಲಾ ಘಟಕದ ಅಧ್ಯಕ್ಷೆ), ಅನ್ನಪೂರ್ಣ (ಚಿಕ್ಕಮಗಳೂರು ಘಟಕದ ಅಧ್ಯಕ್ಷೆ), ಆಶಾರತೀಶ್ (ಕಡೂರು ಘಟದಕ ಅಧ್ಯಕ್ಷೆ), ಬಿ.ಪಿ. ಚಂದ್ರಶೇಖರ್ (ತರೀಕೆರೆ ಘಟಕದ ಅಧ್ಯಕ್ಷ).</p>.<p>ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕುಮಾರ್ಶೆಟ್ಟಿ, ಉಪಾಧ್ಯಕ್ಷರಾದ ಕೋಟೆಮಲ್ಲೇಶ್, ದಶರಥರಾಜ್ ಅರಸ್, ಕಡೂರು ಅಧ್ಯಕ್ಷ ಮನೋಜ್ಶೆಟ್ಟಿ, ಸಂಚಾಲಕ ಯುವರಾಜ್, ಸಂಘಟನಾ ಕಾರ್ಯದರ್ಶಿ ರುದ್ರೇಶ್, ಕಾರ್ಯದರ್ಶಿ ಇಮ್ರಾನ್, ಸಹ ಕಾರ್ಯದರ್ಶಿ ನಿಸಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕನ್ನಡದ ಕೆಲಸ ಮಾಡಲು ಜಾತಿ, ಧರ್ಮದ ಅಗತ್ಯವಿಲ್ಲ. ಕನ್ನಡಾಭಿಮಾನ ಮನಸ್ಸಿನಲ್ಲಿ ಗಟ್ಟಿಯಾಗಿ ನೆಲೆಯೂರಿರಬೇಕು. ತನು ಕನ್ನಡ, ನುಡಿ ಕನ್ನಡ ಎಂಬ ಧ್ಯೇಯದೊಂದಿಗೆ ನಾಡನ್ನು ಕಟ್ಟುವ ಕಾಯಕ ಮಾಡಬೇಕು ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಕೆಂಪನಹಳ್ಳಿ ಅಶೋಕ್ ಹೇಳಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಮಹಿಳಾ ಘಟಕದ ನೂತನ ಅಧ್ಯಕ್ಷರು ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ಭಾಷೆ ಯುವಸಮೂಹವನ್ನು ಆಕರ್ಷಿಸುತ್ತಿದೆ. ಆದರೆ, ಇಂಗ್ಲಿಷ್ ಭಾಷೆಗಿಂತ ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾಡು, ನುಡಿಯ ಏಳಿಗೆಗೆ ದಾರ್ಶನಿಕರು, ಸಂತರು, ಕವಿಶ್ರೇಷ್ಠರು ತಮ್ಮದೇ ಶೈಲಿಯಲ್ಲಿ ಕೀರ್ತನೆ, ಸಾಹಿತ್ಯದ ಮೂಲಕ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.</p>.<p>ಆಯಾ ಭಾಗದಲ್ಲಿ ಕರವೇ ಕಾರ್ಯಕರ್ತರು ಕನ್ನಡದ ಹಬ್ಬ, ಕವಿಗೋಷ್ಠಿ, ಸಾಹಿತ್ಯಾಭಿರುಚಿ ಬೆಳೆಸುವ ಕಾರ್ಯಕ್ರಮ ಹಮ್ಮಿಕೊಂಡು ನಾಡಿನ ಏಕತೆಯನ್ನು ಎತ್ತಿಹಿಡಿಯಬೇಕು. ಕನ್ನಡತನಕ್ಕೆ ಧಕ್ಕೆಯಾದರೆ ಧೈರ್ಯವಾಗಿ ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು ಎಂದರು.</p>.<p>ಕರವೇ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಗುರುಮೂರ್ತಿ ಮಾತನಾಡಿ, ಕಾರ್ಯಕರ್ತರ ಒಗ್ಗಟ್ಟು ಹಾಗೂ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಸಂಘಟನೆ ಗಟ್ಟಿಗೊಳಿಸಲಾಗುವುದು. ಕನ್ನಡಪರ ಕಾರ್ಯಕ್ರಮ ಹಮ್ಮಿಕೊಂಡು ಜನರಲ್ಲಿ ಕನ್ನಡ ಜಾಗೃತಿ ಮೂಡಿಸುವ ಕಾಯಕಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.</p>.<p><strong>ನೂತನ ಪದಗ್ರಹಣ:</strong> ಪೂರ್ಣಿಮಾ ಗುರುಮೂರ್ತಿ (ಜಿಲ್ಲಾ ಘಟಕದ ಅಧ್ಯಕ್ಷೆ), ಅನ್ನಪೂರ್ಣ (ಚಿಕ್ಕಮಗಳೂರು ಘಟಕದ ಅಧ್ಯಕ್ಷೆ), ಆಶಾರತೀಶ್ (ಕಡೂರು ಘಟದಕ ಅಧ್ಯಕ್ಷೆ), ಬಿ.ಪಿ. ಚಂದ್ರಶೇಖರ್ (ತರೀಕೆರೆ ಘಟಕದ ಅಧ್ಯಕ್ಷ).</p>.<p>ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕುಮಾರ್ಶೆಟ್ಟಿ, ಉಪಾಧ್ಯಕ್ಷರಾದ ಕೋಟೆಮಲ್ಲೇಶ್, ದಶರಥರಾಜ್ ಅರಸ್, ಕಡೂರು ಅಧ್ಯಕ್ಷ ಮನೋಜ್ಶೆಟ್ಟಿ, ಸಂಚಾಲಕ ಯುವರಾಜ್, ಸಂಘಟನಾ ಕಾರ್ಯದರ್ಶಿ ರುದ್ರೇಶ್, ಕಾರ್ಯದರ್ಶಿ ಇಮ್ರಾನ್, ಸಹ ಕಾರ್ಯದರ್ಶಿ ನಿಸಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>