<p><strong>ಚಿಕ್ಕಮಗಳೂರು:</strong> ಜಿಲ್ಲೆಯಲ್ಲಿ ಪಾಳುಬಿದ್ದಿರುವ ಕಂದಾಯ ಮತ್ತು ಗೋಮಾಳದ ಭೂಮಿಯನ್ನು ಜಮೀನು ಹೊಂದಿಲ್ಲದ ಬಡ ರೈತರಿಗೆ ವಿತರಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.</p><p>ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರನ್ನು ಭೇಟಿ ಮಾಡಿದ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು. </p>.<p>ಸಾವಿರಾರು ಎಕರೆ ಕಂದಾಯ ಭೂಮಿ ಮತ್ತು ಗೋಮಾಳದ ಭೂಮಿಯನ್ನು ಅರಣ್ಯ ಇಲಾಖೆ ತನ್ನ ವಶದಲ್ಲಿಟ್ಟುಕೊಂಡಿದೆ. ಆ ಭೂಮಿ ಪಾಳು ಬಿದ್ದಿದ್ದು ಯಾರಿಗೂ ಉಪಯೋಗಕ್ಕೆ ಬಾರದಂತಾಗಿದೆ ಎಂದರು.</p><p>ಅರಣ್ಯ ಇಲಾಖೆಯ ವಶದಲ್ಲಿರುವ ಭೂಮಿಗೆ ಕಂದಾಯ ಇಲಾಖೆಯಿಂದ ಯಾವುದೇ ಮ್ಯುಟೇಷನ್ ಮತ್ತು ಆರ್ಆರ್ ಇಂಡೆಕ್ಸ್ ಲಭ್ಯವಿಲ್ಲ. ಆದರೂ, ಅರಣ್ಯ ಇಲಾಖೆ ಸೆಕ್ಷನ್ 4 ಮತ್ತು 17ರ ಅಡಿ ಈ ಜಾಗವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆಯಲು ಮುಂದಾಗಿದೆ. ಈ ಪೈಕಿ ಸಾವಿರಾರು ಎಕರೆ ಭೂಮಿಗೆ ರೈತರು ಈಗಲೂ ಕಂದಾಯ ಕಟ್ಟುತ್ತಿದ್ದಾರೆ ಎಂದು ಹೇಳಿದರು.</p><p>ಅರಣ್ಯ ಇಲಾಖೆ ಸ್ವಾಧೀನದಲ್ಲಿರುವ ಜಾಗದ ದಾಖಲೆ ಪರಿಶೀಲಿಸಿದರೆ ಅವು ಗೋಮಾಳ ಮತ್ತು ಹುಲ್ಲು ಬನ್ನಿ ಎಂದೇ ಬರುತ್ತಿದೆ. ಆದ್ದರಿಂದ ಏನೂ ಬೆಳೆಯದೆ ಪಾಳು ಬಿದ್ದಿರುವ ಈ ಭೂಮಿಯನ್ನು ಭೂರಹಿತ ಬಡ ರೈತರಿಗೆ ವಿತರಿಸಿದರೆ ಅವರ ಬದುಕು ಹಸನಾಗುತ್ತದೆ ಎಂದು ಹೇಳಿದರು.</p><p>ಈ ಸಂಬಂಧ ಹಲವು ಬಾರಿ ಮನವಿ ನೀಡಿದ್ದರೂ ಉಪಯೋಗವಾಗಿಲ್ಲ. ಈಗಲೂ ಸ್ಪಂದಿಸದಿದ್ದರೆ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.</p>.<p>ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಸೋಮು ನಾಯಕ್, ಜಿಲ್ಲಾ ಘಟಕ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ರೂಪೇಶ್, ಕಾರ್ಯಕರ್ತ ಎಂ.ಎಸ್. ಮಲ್ಲೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯಲ್ಲಿ ಪಾಳುಬಿದ್ದಿರುವ ಕಂದಾಯ ಮತ್ತು ಗೋಮಾಳದ ಭೂಮಿಯನ್ನು ಜಮೀನು ಹೊಂದಿಲ್ಲದ ಬಡ ರೈತರಿಗೆ ವಿತರಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.</p><p>ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರನ್ನು ಭೇಟಿ ಮಾಡಿದ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು. </p>.<p>ಸಾವಿರಾರು ಎಕರೆ ಕಂದಾಯ ಭೂಮಿ ಮತ್ತು ಗೋಮಾಳದ ಭೂಮಿಯನ್ನು ಅರಣ್ಯ ಇಲಾಖೆ ತನ್ನ ವಶದಲ್ಲಿಟ್ಟುಕೊಂಡಿದೆ. ಆ ಭೂಮಿ ಪಾಳು ಬಿದ್ದಿದ್ದು ಯಾರಿಗೂ ಉಪಯೋಗಕ್ಕೆ ಬಾರದಂತಾಗಿದೆ ಎಂದರು.</p><p>ಅರಣ್ಯ ಇಲಾಖೆಯ ವಶದಲ್ಲಿರುವ ಭೂಮಿಗೆ ಕಂದಾಯ ಇಲಾಖೆಯಿಂದ ಯಾವುದೇ ಮ್ಯುಟೇಷನ್ ಮತ್ತು ಆರ್ಆರ್ ಇಂಡೆಕ್ಸ್ ಲಭ್ಯವಿಲ್ಲ. ಆದರೂ, ಅರಣ್ಯ ಇಲಾಖೆ ಸೆಕ್ಷನ್ 4 ಮತ್ತು 17ರ ಅಡಿ ಈ ಜಾಗವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆಯಲು ಮುಂದಾಗಿದೆ. ಈ ಪೈಕಿ ಸಾವಿರಾರು ಎಕರೆ ಭೂಮಿಗೆ ರೈತರು ಈಗಲೂ ಕಂದಾಯ ಕಟ್ಟುತ್ತಿದ್ದಾರೆ ಎಂದು ಹೇಳಿದರು.</p><p>ಅರಣ್ಯ ಇಲಾಖೆ ಸ್ವಾಧೀನದಲ್ಲಿರುವ ಜಾಗದ ದಾಖಲೆ ಪರಿಶೀಲಿಸಿದರೆ ಅವು ಗೋಮಾಳ ಮತ್ತು ಹುಲ್ಲು ಬನ್ನಿ ಎಂದೇ ಬರುತ್ತಿದೆ. ಆದ್ದರಿಂದ ಏನೂ ಬೆಳೆಯದೆ ಪಾಳು ಬಿದ್ದಿರುವ ಈ ಭೂಮಿಯನ್ನು ಭೂರಹಿತ ಬಡ ರೈತರಿಗೆ ವಿತರಿಸಿದರೆ ಅವರ ಬದುಕು ಹಸನಾಗುತ್ತದೆ ಎಂದು ಹೇಳಿದರು.</p><p>ಈ ಸಂಬಂಧ ಹಲವು ಬಾರಿ ಮನವಿ ನೀಡಿದ್ದರೂ ಉಪಯೋಗವಾಗಿಲ್ಲ. ಈಗಲೂ ಸ್ಪಂದಿಸದಿದ್ದರೆ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.</p>.<p>ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಸೋಮು ನಾಯಕ್, ಜಿಲ್ಲಾ ಘಟಕ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ರೂಪೇಶ್, ಕಾರ್ಯಕರ್ತ ಎಂ.ಎಸ್. ಮಲ್ಲೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>