<p><strong>ಚಿಕ್ಕಮಗಳೂರು:</strong> ಕರ್ನಾಟಕದಿಂದ ಶಬರಿಮಲೆಗೆ ಹೋಗುತ್ತಿದ್ದ, ಮಾಲಾಧಾರಿಗಳ ಮೇಲೆ ಕೇರಳ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ ಇದು ಖಂಡನೀಯ ಎಂದು ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ರಾಜ್ಯ ಘಟಕ ಅಧ್ಯಕ್ಷ ಎಚ್.ಜಿ. ರಾಜ್ ಪ್ರಶಾಂತ್ ಹೇಳಿದರು.</p>.<p>ರಾಜ್ಯದ ಎಲ್ಲಾ ವಾಹನಗಳನ್ನು ಕೇರಳ ಪೊಲೀಸರು ಎರಿಮಲೈನಲ್ಲಿ ತಡೆದು ನಿಲ್ಲಿಸಿದ್ದಾರೆ. ಕರ್ನಾಟಕದಿಂದ ಬಾಡಿಗೆ ವಾಹನದಲ್ಲಿ ಹೋದ ಮಾಲಾಧಾರಿಗಳು ಇದರಿಂದ ಕಂಗಾಲಾಗಿದ್ದಾರೆ. ರಸ್ತೆ ಮಧ್ಯದಲ್ಲೇ ಮಾಲಾಧಾರಿಗಳು ಮಲಗುವಂತಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.</p>.<p>ಕೇರಳ ರಾಜ್ಯದ ಜನ ಕರ್ನಾಟಕದ ಎಲ್ಲೆಡೆ ವಾಸಿಸುತ್ತಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಕೆಲಸದಲ್ಲೂ ಇದ್ದಾರೆ. ಕರ್ನಾಟಕ ಸರ್ಕಾರ ಕೇರಳದವರಿಗೆ ಯಾವಾಗಲೂ ತೊಂದರೆ ಕೊಟ್ಟಿಲ್ಲ ಎಂದರು.</p>.<p>ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಬಾಂಗ್ಲಾ ದೇಶದವರು ಅಕ್ರಮವಾಗಿ ನೆಲೆಸಿದ್ದು, ಬಾಂಗ್ಲಾದವರಿಗೆ ನಿವೇಶನ ನೀಡಬಾರದು. ಕನ್ನಡಿಗರಿಗೆ ಹೆಚ್ಚಿನ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರಕ್ಷಣಾ ವೇದಿಕೆ ಕಾರ್ಯದರ್ಶಿ ರವಿಚಂದ್ರ, ನಿರ್ದೇಶಕ ಹಾಲಪ್ಪ, ಕಾರ್ಯದರ್ಶಿ ಉಮೇಶ್, ಲೋಕೇಶ್ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕರ್ನಾಟಕದಿಂದ ಶಬರಿಮಲೆಗೆ ಹೋಗುತ್ತಿದ್ದ, ಮಾಲಾಧಾರಿಗಳ ಮೇಲೆ ಕೇರಳ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ ಇದು ಖಂಡನೀಯ ಎಂದು ಕರ್ನಾಟಕ ರಾಜ್ಯ ರಕ್ಷಣಾ ವೇದಿಕೆ ರಾಜ್ಯ ಘಟಕ ಅಧ್ಯಕ್ಷ ಎಚ್.ಜಿ. ರಾಜ್ ಪ್ರಶಾಂತ್ ಹೇಳಿದರು.</p>.<p>ರಾಜ್ಯದ ಎಲ್ಲಾ ವಾಹನಗಳನ್ನು ಕೇರಳ ಪೊಲೀಸರು ಎರಿಮಲೈನಲ್ಲಿ ತಡೆದು ನಿಲ್ಲಿಸಿದ್ದಾರೆ. ಕರ್ನಾಟಕದಿಂದ ಬಾಡಿಗೆ ವಾಹನದಲ್ಲಿ ಹೋದ ಮಾಲಾಧಾರಿಗಳು ಇದರಿಂದ ಕಂಗಾಲಾಗಿದ್ದಾರೆ. ರಸ್ತೆ ಮಧ್ಯದಲ್ಲೇ ಮಾಲಾಧಾರಿಗಳು ಮಲಗುವಂತಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.</p>.<p>ಕೇರಳ ರಾಜ್ಯದ ಜನ ಕರ್ನಾಟಕದ ಎಲ್ಲೆಡೆ ವಾಸಿಸುತ್ತಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಕೆಲಸದಲ್ಲೂ ಇದ್ದಾರೆ. ಕರ್ನಾಟಕ ಸರ್ಕಾರ ಕೇರಳದವರಿಗೆ ಯಾವಾಗಲೂ ತೊಂದರೆ ಕೊಟ್ಟಿಲ್ಲ ಎಂದರು.</p>.<p>ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಬಾಂಗ್ಲಾ ದೇಶದವರು ಅಕ್ರಮವಾಗಿ ನೆಲೆಸಿದ್ದು, ಬಾಂಗ್ಲಾದವರಿಗೆ ನಿವೇಶನ ನೀಡಬಾರದು. ಕನ್ನಡಿಗರಿಗೆ ಹೆಚ್ಚಿನ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರಕ್ಷಣಾ ವೇದಿಕೆ ಕಾರ್ಯದರ್ಶಿ ರವಿಚಂದ್ರ, ನಿರ್ದೇಶಕ ಹಾಲಪ್ಪ, ಕಾರ್ಯದರ್ಶಿ ಉಮೇಶ್, ಲೋಕೇಶ್ ಸುದ್ದಿಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>