ಚಿಕ್ಕಮಗಳೂರು: ಕರ್ನಾಟಕ ಬೆಳೆಗಾರರ ಒಕ್ಕೂಟದ (ಕೆಜಿಎಫ್) ಅಧ್ಯಕ್ಷ ಯು.ಎಂ.ತೀರ್ಥ ಮಲ್ಲೇಶ್ ರಾಜೀನಾಮೆ ನೀಡಿದ್ದು, ಹಂಗಾಮಿ ಅಧ್ಯಕ್ಷರಾಗಿ ಎನ್.ಬಿ.ಉದಯ್ ಕುಮಾರ್ ಆಯ್ಕೆ ಮಾಡಲಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ರಾಜೀನಾಮೆ ಮತ್ತು ಹಂಗಾಮಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಉದಯ್ ಕುಮಾರ್ ಅವರು ಒಕ್ಕೂಟದ ಹಾಸನ ಜಿಲ್ಲೆಯ ಹಾಲಿ ಉಪಾಧ್ಯಕ್ಷರೂ ಆಗಿದ್ದಾರೆ.