ಐಸಿಯುನಲ್ಲಿ ಇಡುವುದಾಗಿ ಕಂದಮ್ಮನನ್ನು ಒಯ್ದ ಆಯಾ, ಮುಕ್ಕಾಲು ಗಂಟೆ ನಂತರ ವಾಪಸ್ ಬಂದು ಶಿಶು ಮೃತಪಟ್ಟಿದೆ ಎಂದು ತಿಳಿಸಿದ್ದರು. ಬಾಣಂತಿ ಮತ್ತು ಅವರ ಪತಿಗೆ ಆಸ್ಪತ್ರೆ ಗೇಟಿನ ಬಳಿಗೆ ಬರುವಂತೆ ಸೂಚಿಸಿ, ಬೇರೊಂದು ಶಿಶುವಿನ ಶವ ನೀಡಿದ್ದಾರೆ. ಸಿಬ್ಬಂದಿಯೇ ಅಂತ್ಯಸಂಸ್ಕಾರ ಮಾಡುವುದಾಗಿ ದಂಪತಿಯಿಂದ ₹ 350 ವಸೂಲಿ ಮಾಡಿ ಆಸ್ಪತ್ರೆಯಿಂದ ಕಳುಹಿಸಿದ್ದಾರೆ ಎಂದು ಪ್ರಕರಣಕ್ಕೆ ಸಂಬಂಧಪಟ್ಟವರ ಹೇಳಿಕೆಗಳಿಂದ ತಿಳಿದುಬಂದಿದೆ.