<p><strong>ಚಿಕ್ಕಮಗಳೂರು</strong>: ‘ಶಿವಮೊಗ್ಗ ಜಿಲ್ಲೆಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ 120 ಎಕರೆಯಷ್ಟೇ ಬಳಕೆಯಾಗಲಿದ್ದು, ಹೆಚ್ಚುವರಿ 2 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.</p>.<p>ಯೋಜನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಯೋಜನೆಗೆ ಗುರುತಿಸಿರುವ ಪ್ರದೇಶದಲ್ಲಿ ಸರ್ಕಾರದ ಜಾಗವೇ ಇದೆ. 40 ಎಕರೆಯಷ್ಟು ಖಾಸಗಿ ಜಮೀನು ಸ್ವಾಧೀನ ಮಾಡಿಕೊಳ್ಳಬೇಕು’ ಎಂದು ಅವರು ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯಿಸಿದರು.</p>.<p>‘ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಬೇಕು. ನೆಲದಡಿ ಪೈಪ್ಲೈನ್ ಮೂಲಕ ನೀರು ಹರಿಯಲಿದೆ. ಪೈಪ್ಲೈನ್ ಕಾಮಗಾರಿ ಪೂರ್ಣಗೊಂಡ ಬಳಿಕ ಆ ಜಾಗದಲ್ಲೂ ಅರಣ್ಯ ಬೆಳೆಸಲು ಅವಕಾಶ ಇದೆ. ಇವೆಲ್ಲವನ್ನೂ ತಜ್ಞರು ಪರಿಶೀಲಿಸಿಯೇ ಅನುಮತಿ ನೀಡುತ್ತಾರೆ’ ಎಂದರು.</p>.<p>‘ಶಿವನಸಮುದ್ರ ಯೋಜನೆ ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಅನುಷ್ಠಾನಗೊಂಡಿತ್ತು. ‘ವಿದ್ಯುತ್ ಉತ್ಪಾದನೆ ಮಾಡಿದರೆ ನೀರಿನ ಸತ್ವ ಹೋಗುತ್ತದೆ, ಆ ನೀರನ್ನು ಕೃಷಿಗೆ ಬಳಸಲು ಆಗುವುದಿಲ್ಲ’ ಎಂದು ಸ್ವಹಿತಾಸಕ್ತಿಯ ಕೆಲವರು ಸುಳ್ಳು ಹಬ್ಬಿಸಿದ್ದರು. ಅಂಥ ಜನ ಎಲ್ಲಾ ಕಾಲದಲ್ಲೂ ಇರುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಶಿವಮೊಗ್ಗ ಜಿಲ್ಲೆಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ 120 ಎಕರೆಯಷ್ಟೇ ಬಳಕೆಯಾಗಲಿದ್ದು, ಹೆಚ್ಚುವರಿ 2 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.</p>.<p>ಯೋಜನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಯೋಜನೆಗೆ ಗುರುತಿಸಿರುವ ಪ್ರದೇಶದಲ್ಲಿ ಸರ್ಕಾರದ ಜಾಗವೇ ಇದೆ. 40 ಎಕರೆಯಷ್ಟು ಖಾಸಗಿ ಜಮೀನು ಸ್ವಾಧೀನ ಮಾಡಿಕೊಳ್ಳಬೇಕು’ ಎಂದು ಅವರು ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯಿಸಿದರು.</p>.<p>‘ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಬೇಕು. ನೆಲದಡಿ ಪೈಪ್ಲೈನ್ ಮೂಲಕ ನೀರು ಹರಿಯಲಿದೆ. ಪೈಪ್ಲೈನ್ ಕಾಮಗಾರಿ ಪೂರ್ಣಗೊಂಡ ಬಳಿಕ ಆ ಜಾಗದಲ್ಲೂ ಅರಣ್ಯ ಬೆಳೆಸಲು ಅವಕಾಶ ಇದೆ. ಇವೆಲ್ಲವನ್ನೂ ತಜ್ಞರು ಪರಿಶೀಲಿಸಿಯೇ ಅನುಮತಿ ನೀಡುತ್ತಾರೆ’ ಎಂದರು.</p>.<p>‘ಶಿವನಸಮುದ್ರ ಯೋಜನೆ ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಅನುಷ್ಠಾನಗೊಂಡಿತ್ತು. ‘ವಿದ್ಯುತ್ ಉತ್ಪಾದನೆ ಮಾಡಿದರೆ ನೀರಿನ ಸತ್ವ ಹೋಗುತ್ತದೆ, ಆ ನೀರನ್ನು ಕೃಷಿಗೆ ಬಳಸಲು ಆಗುವುದಿಲ್ಲ’ ಎಂದು ಸ್ವಹಿತಾಸಕ್ತಿಯ ಕೆಲವರು ಸುಳ್ಳು ಹಬ್ಬಿಸಿದ್ದರು. ಅಂಥ ಜನ ಎಲ್ಲಾ ಕಾಲದಲ್ಲೂ ಇರುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>