ಕೊಪ್ಪ: ‘ಅಡಿಕೆ ಬೆಳೆಗೆ ಹಳದಿ ರೋಗ, ಕೊಳೆ ರೋಗ ಇನ್ನಿತರೆ ಕಾಯಿಲೆಗಳ ಜತೆಗೆ ಇದೀಗ ಕಾಣಿಸಿಕೊಂಡಿರುವ ಎಲೆಚುಕ್ಕಿ ರೋಗ, ಅತಿವೃಷ್ಟಿಯಿಂದ ಅಡಿಕೆ ಬೆಳೆಗಾರರ ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರದ ಅಡಿಕೆ ಆಮದು ನೀತಿ ಕಂಟಕಪ್ರಾಯವಾಗಿದೆ’ ಎಂದು ಕೆಪಿಸಿಸಿ ವಕ್ತಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.