<p><strong>ಶೃಂಗೇರಿ</strong>: ನೂರು ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ 15 ವರ್ಷಗಳ ಹಿಂದೆ ಮಂಜೂರಾತಿ ಆಗಿದ್ದರೂ, ಆಸ್ಪತ್ರೆ ನಿರ್ಮಾಣಕ್ಕಾಗಿ 2 ವರ್ಷಗಳಿಂದ ನೂರು ಹಾಸಿಗೆ ಆಸ್ಪತ್ರೆ ಹೋರಾಟ ಸಮಿತಿಯು ಶೃಂಗೇರಿ ಬಂದ್ ನಡೆಸಿ, ಬೃಹತ್ ಪ್ರತಿಭಟನೆಯನ್ನು ನಡೆಸಿದರೂ ಸರ್ಕಾರದ ವೈಫಲ್ಯದಿಂದ ಆಸ್ಪತ್ರೆಯಾಗಿಲ್ಲ' ಎಂದು ಸಮಿಯ ರಂಜಿತ್ ದೂರಿದರು.</p>.<p>ನೂರು ಹಾಸಿಗೆ ಆಸ್ಪತ್ರೆ ಹೋರಾಟ ಸಮಿತಿ ಸಂತೆ ಮಾರುಕಟ್ಟೆ ಬಳಿ ಆಯೋಜಿಸಿದ್ದ 2ನೇ ದಿನದ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.</p>.<p>ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಮತ್ತು ಸ್ಥಳೀಯ ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಆಸ್ಪತ್ರೆ ಆಗಬೇಕು ಎಂಬ ನಮ್ಮ ಬೇಡಿಕೆ ಸಲ್ಲಿಸಿದರೂ ಈಡೇರಲಿಲ್ಲ. ಇನ್ನಾದರೂ ಎಚ್ಚೇತ್ತು ಊರಿಗೆ ಅವಶ್ಯವಿರುವ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಿ ಎಂದರು.</p>.<p>ಸಮಿತಿಯ ಹೋರಾಟಕ್ಕೆ ಬೆಂಬಲಿಸಿದ ಬೇಸೂರು ರಂಜಿತ್ ಗೌಡ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಮಾತನಾಡಿ, ಶೃಂಗೇರಿ ಕ್ಷೇತ್ರದ ಜನನಾಯಕರೇ ನಿಜವಾದ ಕಾಳಜಿ ಜನರ ಮೇಲಿದ್ದರೆ ನಿಮ್ಮ ರಾಜಕೀಯ ಸ್ಥಾನಕ್ಕೆ ರಾಜೀನಾಮೆ ನೀಡಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ಹೋರಾಟದಲ್ಲಿ ಭಾಗಿಯಾಗಿ ಎಂದು ಅವರು ಹೇಳಿದರು.</p>.<p>ಸಮಿತಿಯ ಆದರ್ಶ ಮಾತನಾಡಿ, ಭಾನುವಾರ ಕೊಪ್ಪದಲ್ಲಿ ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಒಳಗಾಗಿ ಬೇಡಿಕೆ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡ ಬೇಕಾಗಿದೆ. ಇಲ್ಲಾವಾದರೆ ಕೊಪ್ಪ ಚಲೋ ಹೋರಾಟ ನಡೆಸುತ್ತೇವೆ ಎಂದರು.</p>.<p>ಸತ್ಯಾಗ್ರಹಕ್ಕೆ ಆಟೊ ಚಾಲಕರ ಮತ್ತು ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟರ ಸಂಘ, ಕರ್ನಾಟಕ ಜನಶಕ್ತಿ ಸಂಘಟನೆ ಹಾಗೂ ನಾಗರಿಕರು ಧರಣಿ ಸತ್ಯಾಗ್ರಹ ನಡೆಯುವ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದರು.</p>.<p>ಪ್ರವೀಣ್, ಮಂಜುನಾಯ್ಕ್, ಅನಿರುದ್ಧ್ ಕೊರಡಕಲ್ಲು, ನಿರಂಜನ್, ಸುನೀಲ್, ಅನಿರುದ್ಧ್ ಹೆಬ್ಬಾರ್, ಅನುಪ್, ಅಂಜನ್, ಚೇತನ್, ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ</strong>: ನೂರು ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ 15 ವರ್ಷಗಳ ಹಿಂದೆ ಮಂಜೂರಾತಿ ಆಗಿದ್ದರೂ, ಆಸ್ಪತ್ರೆ ನಿರ್ಮಾಣಕ್ಕಾಗಿ 2 ವರ್ಷಗಳಿಂದ ನೂರು ಹಾಸಿಗೆ ಆಸ್ಪತ್ರೆ ಹೋರಾಟ ಸಮಿತಿಯು ಶೃಂಗೇರಿ ಬಂದ್ ನಡೆಸಿ, ಬೃಹತ್ ಪ್ರತಿಭಟನೆಯನ್ನು ನಡೆಸಿದರೂ ಸರ್ಕಾರದ ವೈಫಲ್ಯದಿಂದ ಆಸ್ಪತ್ರೆಯಾಗಿಲ್ಲ' ಎಂದು ಸಮಿಯ ರಂಜಿತ್ ದೂರಿದರು.</p>.<p>ನೂರು ಹಾಸಿಗೆ ಆಸ್ಪತ್ರೆ ಹೋರಾಟ ಸಮಿತಿ ಸಂತೆ ಮಾರುಕಟ್ಟೆ ಬಳಿ ಆಯೋಜಿಸಿದ್ದ 2ನೇ ದಿನದ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.</p>.<p>ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಮತ್ತು ಸ್ಥಳೀಯ ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಆಸ್ಪತ್ರೆ ಆಗಬೇಕು ಎಂಬ ನಮ್ಮ ಬೇಡಿಕೆ ಸಲ್ಲಿಸಿದರೂ ಈಡೇರಲಿಲ್ಲ. ಇನ್ನಾದರೂ ಎಚ್ಚೇತ್ತು ಊರಿಗೆ ಅವಶ್ಯವಿರುವ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಿ ಎಂದರು.</p>.<p>ಸಮಿತಿಯ ಹೋರಾಟಕ್ಕೆ ಬೆಂಬಲಿಸಿದ ಬೇಸೂರು ರಂಜಿತ್ ಗೌಡ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರು ಮಾತನಾಡಿ, ಶೃಂಗೇರಿ ಕ್ಷೇತ್ರದ ಜನನಾಯಕರೇ ನಿಜವಾದ ಕಾಳಜಿ ಜನರ ಮೇಲಿದ್ದರೆ ನಿಮ್ಮ ರಾಜಕೀಯ ಸ್ಥಾನಕ್ಕೆ ರಾಜೀನಾಮೆ ನೀಡಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ಹೋರಾಟದಲ್ಲಿ ಭಾಗಿಯಾಗಿ ಎಂದು ಅವರು ಹೇಳಿದರು.</p>.<p>ಸಮಿತಿಯ ಆದರ್ಶ ಮಾತನಾಡಿ, ಭಾನುವಾರ ಕೊಪ್ಪದಲ್ಲಿ ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ಒಳಗಾಗಿ ಬೇಡಿಕೆ ಈಡೇರಿಸುತ್ತಾರೆ ಎಂಬುದನ್ನು ಕಾದು ನೋಡ ಬೇಕಾಗಿದೆ. ಇಲ್ಲಾವಾದರೆ ಕೊಪ್ಪ ಚಲೋ ಹೋರಾಟ ನಡೆಸುತ್ತೇವೆ ಎಂದರು.</p>.<p>ಸತ್ಯಾಗ್ರಹಕ್ಕೆ ಆಟೊ ಚಾಲಕರ ಮತ್ತು ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರು ಮತ್ತು ಏಜೆಂಟರ ಸಂಘ, ಕರ್ನಾಟಕ ಜನಶಕ್ತಿ ಸಂಘಟನೆ ಹಾಗೂ ನಾಗರಿಕರು ಧರಣಿ ಸತ್ಯಾಗ್ರಹ ನಡೆಯುವ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದರು.</p>.<p>ಪ್ರವೀಣ್, ಮಂಜುನಾಯ್ಕ್, ಅನಿರುದ್ಧ್ ಕೊರಡಕಲ್ಲು, ನಿರಂಜನ್, ಸುನೀಲ್, ಅನಿರುದ್ಧ್ ಹೆಬ್ಬಾರ್, ಅನುಪ್, ಅಂಜನ್, ಚೇತನ್, ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>