<p>ಕೊಪ್ಪ: ಶೌಚಕ್ಕೆಂದು ಹೋದಾಗ ವಿಷ ಜಂತು ಕಡಿದು ತಾಲ್ಲೂಕಿನ ನುಗ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವನ್ ಎಸ್ಟೇಟ್ (ಬಪ್ಪುಂಜಿ)ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ನಿಜಗುಣ ಮತ್ತು ದಿ.ಕೊಟ್ರಮ್ಮ ದಂಪತಿ ಪುತ್ರ ಕೊಟ್ರೇಶ್ (25) ಮೃತಪಟ್ಟಿದ್ದಾರೆ.</p>.<p>ಮನೆಯಲ್ಲಿ ಸೋಮವಾರ ಘಟನೆ ನಡೆದ ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ವಾಪಾಸ್ ಕರೆದುಕೊಂಡು ಬಂದು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿಟ್ಟಿದ್ದಾರೆ ಎಂದು ಗೊತ್ತಾಗಿದೆ.</p>.<p>ದಾವಣಗೆರೆ ಮೂಲದ ನಿಜಗುಣ ಅವರ ಕುಟುಂಬ ಹಲವು ವರ್ಷಗಳಿಂದ ದೇವನ್ ಎಸ್ಟೇಟ್ನಲ್ಲಿ ಕೂಲಿ ಕೆಲಸ ಮಾಡಿಕೊಂಡಿತ್ತು. ಅಂತ್ಯಕ್ರಿಯೆ ಬುಧವಾರ ನಡೆಯಿತು. ಕೊಟ್ರೇಶ್ ಅವರಿಗೆ ಹಾವು ಕಚ್ಚಿ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-126-107215740</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪ: ಶೌಚಕ್ಕೆಂದು ಹೋದಾಗ ವಿಷ ಜಂತು ಕಡಿದು ತಾಲ್ಲೂಕಿನ ನುಗ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವನ್ ಎಸ್ಟೇಟ್ (ಬಪ್ಪುಂಜಿ)ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ನಿಜಗುಣ ಮತ್ತು ದಿ.ಕೊಟ್ರಮ್ಮ ದಂಪತಿ ಪುತ್ರ ಕೊಟ್ರೇಶ್ (25) ಮೃತಪಟ್ಟಿದ್ದಾರೆ.</p>.<p>ಮನೆಯಲ್ಲಿ ಸೋಮವಾರ ಘಟನೆ ನಡೆದ ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ವಾಪಾಸ್ ಕರೆದುಕೊಂಡು ಬಂದು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿಟ್ಟಿದ್ದಾರೆ ಎಂದು ಗೊತ್ತಾಗಿದೆ.</p>.<p>ದಾವಣಗೆರೆ ಮೂಲದ ನಿಜಗುಣ ಅವರ ಕುಟುಂಬ ಹಲವು ವರ್ಷಗಳಿಂದ ದೇವನ್ ಎಸ್ಟೇಟ್ನಲ್ಲಿ ಕೂಲಿ ಕೆಲಸ ಮಾಡಿಕೊಂಡಿತ್ತು. ಅಂತ್ಯಕ್ರಿಯೆ ಬುಧವಾರ ನಡೆಯಿತು. ಕೊಟ್ರೇಶ್ ಅವರಿಗೆ ಹಾವು ಕಚ್ಚಿ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-126-107215740</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>