ಕಾರ್ಮಿಕರು, ನೌಕರರು ಸಹಕಾರ ಸಾರಿಗೆ ಸಂಸ್ಥೆ ಕಚೇರಿ ಎದುರು ಹಮ್ಮಿ ಕೊಂಡ ಪ್ರತಿಭಟನೆ ಅಂಗವಾಗಿ ಪಟ್ಟಣದ ಪುರಭವನದಿಂದ ಮೆರವಣಿಗೆ ಹೊರಟು, ಬಸ್ ನಿಲ್ದಾಣದ ಮೂಲಕ ಸಾಗಿ ಸಂಸ್ಥೆ ಕಚೇರಿ ಎದುರು ಜಮಾಯಿ ಸಿದರು. ಈ ಸಂದರ್ಭ ಸಂಸ್ಥೆ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿ, ಆರ್ಥಿಕ ಸಂಕಷ್ಟಕ್ಕೆ ಕಾರಣ ವಾದ ಆಡಳಿತ ಮಂಡಳಿಯನ್ನು ತನಿಖೆಗೆ ಒಳ ಪಡಿಸಬೇಕು ಎಂದು ಒತ್ತಾಯಿಸಿದರು.