<p><strong>ಕೊಪ್ಪ:</strong> ಉತ್ತಮ ಗುಣಮಟ್ಟದಿಂದ ಕೂಡಿದ್ದ ಪಟ್ಟಣದ ಟಾಕೀಸ್ ರಸ್ತೆಗೆ ಮಂಗಳವಾರ ಡಾಂಬರೀಕರಣ ಮಾಡಿರುವುದಕ್ಕೆ ಪಂಚಾಯಿತಿ ಸದಸ್ಯರು ಸಹಿತ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.</p>.<p>ಟಾಕೀಸ್ ರಸ್ತೆಗೆ ಹೊಂದಿಕೊಂಡಿರುವ, ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದ ಎದುರು ಇರುವ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದರೂ ಗುಂಡಿ ಮುಚ್ಚುವ ಕೆಲಸ ಮಾಡಿಲ್ಲ. ಇಲ್ಲವೇ ಈ ಹಣವನ್ನು ಬೇರೆ ಅಭಿವೃದ್ಧಿ ಕೆಲಸಕ್ಕೆ ಬಳಸಬಹುದಿತ್ತು. ಜನರ ತೆರಿಗೆ ಹಣ ಬೇಡದ ಕಡೆ ವ್ಯಯ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿದ್ದಾರೆ.</p>.<p>‘ಟಾಕೀಸ್ ರಸ್ತೆ ಚೆನ್ನಾಗಿದೆ. ಇಂಟರ್ ಲಾಕ್ ಹಾಕಲಾಗಿದೆ. ಈ ರಸ್ತೆಗೆ ಬಳಸುತ್ತಿರುವ ಅನುದಾನವನ್ನು ಇದೇ ವಾರ್ಡ್ನ ಬೇರೆ ಅಭಿವೃದ್ಧಿ ಕೆಲಸಕ್ಕೆ ಬಳಸಬಹುದಿತ್ತು’ ಎಂದು ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ಸಂದೇಶ್ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಕಾಂತ್, ‘ರಸ್ತೆ ಡಾಂಬರೀಕರಣ 15ನೇ ಹಣಕಾಸು ಯೋಜನೆಯ ಅನುದಾನವಾಗಿದ್ದು, ಕಳೆದ ಬಾರಿಯೇ ಸದಸ್ಯರು ನಿರ್ಣಯ ಕೈಗೊಂಡಿದ್ದರು. ಗುಂಡಿ ಬಿದ್ದ ಕಡೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಬೇರೆ ಇಲಾಖೆಯಿಂದ ಯೋಜನೆ ರೂಪಿತವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ:</strong> ಉತ್ತಮ ಗುಣಮಟ್ಟದಿಂದ ಕೂಡಿದ್ದ ಪಟ್ಟಣದ ಟಾಕೀಸ್ ರಸ್ತೆಗೆ ಮಂಗಳವಾರ ಡಾಂಬರೀಕರಣ ಮಾಡಿರುವುದಕ್ಕೆ ಪಂಚಾಯಿತಿ ಸದಸ್ಯರು ಸಹಿತ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.</p>.<p>ಟಾಕೀಸ್ ರಸ್ತೆಗೆ ಹೊಂದಿಕೊಂಡಿರುವ, ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದ ಎದುರು ಇರುವ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದರೂ ಗುಂಡಿ ಮುಚ್ಚುವ ಕೆಲಸ ಮಾಡಿಲ್ಲ. ಇಲ್ಲವೇ ಈ ಹಣವನ್ನು ಬೇರೆ ಅಭಿವೃದ್ಧಿ ಕೆಲಸಕ್ಕೆ ಬಳಸಬಹುದಿತ್ತು. ಜನರ ತೆರಿಗೆ ಹಣ ಬೇಡದ ಕಡೆ ವ್ಯಯ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿದ್ದಾರೆ.</p>.<p>‘ಟಾಕೀಸ್ ರಸ್ತೆ ಚೆನ್ನಾಗಿದೆ. ಇಂಟರ್ ಲಾಕ್ ಹಾಕಲಾಗಿದೆ. ಈ ರಸ್ತೆಗೆ ಬಳಸುತ್ತಿರುವ ಅನುದಾನವನ್ನು ಇದೇ ವಾರ್ಡ್ನ ಬೇರೆ ಅಭಿವೃದ್ಧಿ ಕೆಲಸಕ್ಕೆ ಬಳಸಬಹುದಿತ್ತು’ ಎಂದು ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ಸಂದೇಶ್ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಕಾಂತ್, ‘ರಸ್ತೆ ಡಾಂಬರೀಕರಣ 15ನೇ ಹಣಕಾಸು ಯೋಜನೆಯ ಅನುದಾನವಾಗಿದ್ದು, ಕಳೆದ ಬಾರಿಯೇ ಸದಸ್ಯರು ನಿರ್ಣಯ ಕೈಗೊಂಡಿದ್ದರು. ಗುಂಡಿ ಬಿದ್ದ ಕಡೆ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಬೇರೆ ಇಲಾಖೆಯಿಂದ ಯೋಜನೆ ರೂಪಿತವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>