<p><strong>ಕೊಪ್ಪ:</strong> ‘ಶಿವಮೊಗ್ಗ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ಮಾರ್ಗವಾಗಿ ಮಂಗಳೂರು ಸಂಪರ್ಕ ರೈಲ್ವೆ ಮಾರ್ಗ ಅನುಷ್ಠಾನಕ್ಕೆ ಈ ಹಿಂದೆ ಸರ್ವೆ ನಡೆದಿದ್ದು, ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾರ್ಗ ಬದಲಾಯಿಸಿ ಕೊಪ್ಪ, ಎನ್.ಆರ್.ಪುರ ಭಾಗದ ಜನರಿಗೆ ಘೋರ ಅನ್ಯಾಯ ಮಾಡುತ್ತಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಓಣಿತೋಟ ರತ್ನಾಕರ್ ಹೇಳಿದ್ದಾರೆ.</p>.<p>ಶಿವಮೊಗ್ಗದ ಲೋಕಸಭಾ ಸದಸ್ಯ ರಾಘವೇಂದ್ರ ಅವರು ರೈಲ್ವೆ ಮಾರ್ಗವನ್ನು ಶಿವಮೊಗ್ಗ, ಮುತ್ತಿನಕೊಪ್ಪ, ಮುಡುಬ, ತೀರ್ಥಹಳ್ಳಿ, ಶೃಂಗೇರಿ ಮೂಲಕ ಮಂಗಳೂರಿಗೆ ಮಾರ್ಗ ಬದಲಾಯಿಸುವಂತೆ ಮಾಡಿದ್ದಾರೆ. ಈ ಬಗ್ಗೆ ಧ್ವನಿ ಎತ್ತದ ಸಂಸದ ಶ್ರೀನಿವಾಸ ಪೂಜಾರಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಈಗಾಗಲೇ ಶಿವಮೊಗ್ಗ, ಮುತ್ತಿನಕೊಪ್ಪ, ಮುಡುಬ, ತೀರ್ಥಹಳ್ಳಿ, ಶೃಂಗೇರಿ ರೈಲ್ವೆ ಮಾರ್ಗಕ್ಕೆ ₹3,800 ಕೋಟಿ ಅಂದಾಜು ವೆಚ್ಚದಲ್ಲಿ ಟೆಂಡರ್ ಕರೆಯುವ ಹಂತದಲ್ಲಿದ್ದು, ಈ ಕೂಡಲೇ ಶೃಂಗೇರಿ ಕ್ಷೇತ್ರದ ಜನರು ಇದರ ವಿರುದ್ಧ ಪ್ರತಿಭಟಿಸಬೇಕು. ಮುಂದಿನ ದಿನಗಳಲ್ಲಿ ನಾವು ನಡೆಸುವ ಹೋರಾಟದಲ್ಲಿ ಬಿಜೆಪಿಯವರು ಭಾಗವಹಿಸಿ ಶೃಂಗೇರಿ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅವರು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-126-1829124170</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ:</strong> ‘ಶಿವಮೊಗ್ಗ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ಮಾರ್ಗವಾಗಿ ಮಂಗಳೂರು ಸಂಪರ್ಕ ರೈಲ್ವೆ ಮಾರ್ಗ ಅನುಷ್ಠಾನಕ್ಕೆ ಈ ಹಿಂದೆ ಸರ್ವೆ ನಡೆದಿದ್ದು, ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾರ್ಗ ಬದಲಾಯಿಸಿ ಕೊಪ್ಪ, ಎನ್.ಆರ್.ಪುರ ಭಾಗದ ಜನರಿಗೆ ಘೋರ ಅನ್ಯಾಯ ಮಾಡುತ್ತಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಓಣಿತೋಟ ರತ್ನಾಕರ್ ಹೇಳಿದ್ದಾರೆ.</p>.<p>ಶಿವಮೊಗ್ಗದ ಲೋಕಸಭಾ ಸದಸ್ಯ ರಾಘವೇಂದ್ರ ಅವರು ರೈಲ್ವೆ ಮಾರ್ಗವನ್ನು ಶಿವಮೊಗ್ಗ, ಮುತ್ತಿನಕೊಪ್ಪ, ಮುಡುಬ, ತೀರ್ಥಹಳ್ಳಿ, ಶೃಂಗೇರಿ ಮೂಲಕ ಮಂಗಳೂರಿಗೆ ಮಾರ್ಗ ಬದಲಾಯಿಸುವಂತೆ ಮಾಡಿದ್ದಾರೆ. ಈ ಬಗ್ಗೆ ಧ್ವನಿ ಎತ್ತದ ಸಂಸದ ಶ್ರೀನಿವಾಸ ಪೂಜಾರಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಈಗಾಗಲೇ ಶಿವಮೊಗ್ಗ, ಮುತ್ತಿನಕೊಪ್ಪ, ಮುಡುಬ, ತೀರ್ಥಹಳ್ಳಿ, ಶೃಂಗೇರಿ ರೈಲ್ವೆ ಮಾರ್ಗಕ್ಕೆ ₹3,800 ಕೋಟಿ ಅಂದಾಜು ವೆಚ್ಚದಲ್ಲಿ ಟೆಂಡರ್ ಕರೆಯುವ ಹಂತದಲ್ಲಿದ್ದು, ಈ ಕೂಡಲೇ ಶೃಂಗೇರಿ ಕ್ಷೇತ್ರದ ಜನರು ಇದರ ವಿರುದ್ಧ ಪ್ರತಿಭಟಿಸಬೇಕು. ಮುಂದಿನ ದಿನಗಳಲ್ಲಿ ನಾವು ನಡೆಸುವ ಹೋರಾಟದಲ್ಲಿ ಬಿಜೆಪಿಯವರು ಭಾಗವಹಿಸಿ ಶೃಂಗೇರಿ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅವರು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-126-1829124170</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>