‘ಬಿಜೆಪಿ ದೊಡ್ಡ ರಾಜಕೀಯ ಪಕ್ಷವಾಗಿದ್ದು, ಟಿಕೆಟ್ಗೆ ಪೈಪೋಟಿ ಇರುವುದು ಸಾಮಾನ್ಯ. ಸಂಘಟನೆ ಗಟ್ಟಿಯಾಗಿದೆ ಎಂಬುದಕ್ಕೆ ಇದು ಸಾಕ್ಷಿ. ಉಡುಪಿ–ಚಿಕ್ಕಮಗಳೂರು ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದ ಶೋಭಾ ಕರಂದ್ಲಾಜೆ, ಪ್ರಮೋದ್ ಮಧ್ವರಾಜ್ ಸೇರಿ ಎಲ್ಲರೂ ನನಗೆ ಶುಭ ಹಾರೈಸಿದ್ದಾರೆ. ಸಿ.ಟಿ.ರವಿ ಅವರ ಜತೆಗೂಡಿಯೇ ಕಾರ್ಯಕರ್ತರ ಸಭೆ ನಡೆಸಲಾಗಿದೆ’ ಎಂದರು.