<p><strong>ಚಿಕ್ಕಮಗಳೂರು</strong>: ಜಿಲ್ಲೆಯಲ್ಲಿ ಕಾಡಾನೆಗಳಿಂದ ಪ್ರಾಣಹಾನಿ, ಬೆಳೆಹಾನಿ ನಿಯಂತ್ರಣ ಮಾಡಲು ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ಪರಿಹಾರ ಕಾರ್ಯ ಯೋಜನೆ ರೂಪಿಸುವುದಾಗಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್ ಭರವಸೆ ನೀಡಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.</p>.<p>‘ದೆಹಲಿಯಲ್ಲಿ ಮಂಗಳವಾರ ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ವೇಳೆ ಆನೆ ದಾಳಿಯಿಂದ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹಾನಿ ಬಗ್ಗೆ ವಿವರವಾದ ಮಾಹಿತಿ ನೀಡಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಬುಧವಾರ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.</p>.<p>‘ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಚಿಕ್ಕಮಗಳೂರು ತಾಲ್ಲೂಕಿನ ವಿವಿಧೆಡೆ ಆನೆ ದಾಳಿಯಿಂದ 5 ಜನ ಮೃತಪಟ್ಟಿದ್ದಾರೆ. ಒಂದು ವಾರದ ಅಂತರದಲ್ಲೇ ಬನ್ನೂರಿನ ಅನಿತಾ, ಶೃಂಗೇರಿಯ ಸುಬ್ಬೇಗೌಡ ಬಲಿಯಾಗಿದ್ದಾರೆ. ಆನೆಗಳ ದಾಳಿಯಿಂದ ಕೃಷಿ ಚಟುವಟಿಕೆ ನಡೆಸಲು ಕಷ್ಟವಾಗುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ’ ಎಂದು ತಿಳಿಸಿದ್ದಾರೆ.</p>.<p>ರಾಜ್ಯ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮೂಲಕ ವರದಿ ಪಡೆದು ಕಾರ್ಯ ಯೋಜನೆ ರೂಪಿಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಜಿಲ್ಲೆಯಲ್ಲಿ ಕಾಡಾನೆಗಳಿಂದ ಪ್ರಾಣಹಾನಿ, ಬೆಳೆಹಾನಿ ನಿಯಂತ್ರಣ ಮಾಡಲು ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ಪರಿಹಾರ ಕಾರ್ಯ ಯೋಜನೆ ರೂಪಿಸುವುದಾಗಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್ ಭರವಸೆ ನೀಡಿದ್ದಾರೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.</p>.<p>‘ದೆಹಲಿಯಲ್ಲಿ ಮಂಗಳವಾರ ಅರಣ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ವೇಳೆ ಆನೆ ದಾಳಿಯಿಂದ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹಾನಿ ಬಗ್ಗೆ ವಿವರವಾದ ಮಾಹಿತಿ ನೀಡಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಬುಧವಾರ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.</p>.<p>‘ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಚಿಕ್ಕಮಗಳೂರು ತಾಲ್ಲೂಕಿನ ವಿವಿಧೆಡೆ ಆನೆ ದಾಳಿಯಿಂದ 5 ಜನ ಮೃತಪಟ್ಟಿದ್ದಾರೆ. ಒಂದು ವಾರದ ಅಂತರದಲ್ಲೇ ಬನ್ನೂರಿನ ಅನಿತಾ, ಶೃಂಗೇರಿಯ ಸುಬ್ಬೇಗೌಡ ಬಲಿಯಾಗಿದ್ದಾರೆ. ಆನೆಗಳ ದಾಳಿಯಿಂದ ಕೃಷಿ ಚಟುವಟಿಕೆ ನಡೆಸಲು ಕಷ್ಟವಾಗುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ’ ಎಂದು ತಿಳಿಸಿದ್ದಾರೆ.</p>.<p>ರಾಜ್ಯ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮೂಲಕ ವರದಿ ಪಡೆದು ಕಾರ್ಯ ಯೋಜನೆ ರೂಪಿಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>