ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ಸ್ಥಿರ, ಕಾಂಗ್ರೆಸ್‌ ಕನಸು ನನಸಾಗದು: ಸಚಿವ ಕೋಟ ಶ್ರೀನಿವಾಸ ಪೂಜಾರಿ

Last Updated 18 ಆಗಸ್ಟ್ 2021, 16:50 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಸರ್ಕಾರದ ವಿಚಾರದಲ್ಲಿ ಕಾಂಗ್ರೆಸ್‌ ಸಹಿತ ಯಾರ ಕನಸೂ ನನಸಾಗಲ್ಲ. ಸರ್ಕಾರ ಸ್ಥಿರವಾಗಿ ಇದೆ’ ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕನಸು ಕಾಣುವುದು ತಪ್ಪಲ್ಲ. ಕನಸು ಕಾಣಲು ಎಲ್ಲರಿಗೂ ಹಕ್ಕಿದೆ’ ಎಂದರು.

‘ದತ್ತ ಪೀಠಕ್ಕೆಸಂಬಂಧಿಸಿದಂತೆ ವಾದ–ಪ್ರತಿವಾದ ಮುಗಿದು, ತೀರ್ಪು ಬಾಕಿ ಇದೆ ಎಂಬ ಸುದ್ದಿ ಇದೆ. ತೀರ್ಪು ಆಧರಿಸಿ ಸರ್ಕಾರ ಮುಂದಿನಹೆಜ್ಜೆ ಇಡಲಿದೆ’ ಎಂದು ತಿಳಿಸಿದರು.

‘ವ್ಯಕ್ತಿ, ಶಕ್ತಿ, ಪಕ್ಷ, ಸಂಸ್ಥೆ ಯಾವುದೂ ಹೆಚ್ಚು ಅಲ್ಲ. ಕೆಟ್ಟ ಶಕ್ತಿಗಳನ್ನು ಸಹಿಸಲು ಸಾಧ್ಯವಿಲ್ಲ. ಸಂವಿಧಾನ ವಿರೋಧಿಸುವವರು, ರಾಷ್ಟ್ರ ಭಾವುಟಕ್ಕೆ ಅಗೌರವ ತೋರುವವರು ಇದ್ದರೆ ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT