<p><strong>ಕೊಟ್ಟಿಗೆಹಾರ: </strong>ಹೋದ ವರ್ಷ ಅತಿವೃಷ್ಟಿಯಿಂದ ಮಲೆನಾಡಿನಲ್ಲಿ ಭೂಕುಸಿತ ಸಂಭವಿಸಿದ್ದ ಚೆನ್ನಹಡ್ಲು, ದೇವನಗೂಲ್ ಗುಡ್ಡ, ಸುಂದರಬೈಲ್, ಬಾಳೂರು ಹೊರಟ್ಟಿ, ಮಲೆಮನೆ, ಮಧುಗುಂಡಿ ಗ್ರಾಮಗಳಿಗೆ ಉನ್ನತ ಮಟ್ಟದ ಅಧ್ಯಯನ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಶನಿವಾರ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ‘ಭೂಕುಸಿತವಾದ ಪ್ರದೇಶದ ಬಗ್ಗೆ ಅಧ್ಯಯನಕ್ಕೆ ಸಮಿತಿಯನ್ನು ಸರ್ಕಾರ ನಿಯುಕ್ತಿ ಮಾಡಿದೆ. ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ, ಪಾರಿಸಾರಿಕ ದುಷ್ಪರಿಣಾಮಗಳನ್ನು ಕಂಡು ಹಿಡಿದು, ಮುಂದೆ ತಡೆಯುವ ಬಗ್ಗೆ ಸಮಾ ಲೋಚನೆ ಮಾಡಲಾಗುತ್ತದೆ. ಈ ಹಿಂದೆ ನಡೆದಿರುವ ಅಧ್ಯಯನದ ಬಗ್ಗೆಯೂ ಮಾಹಿತಿ ಕಲೆ ಹಾಕಿ, ಈ ಪ್ರದೇಶದ ಸ್ಥಾನಿಕ ವಿಭಾಗೀಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದರು.</p>.<p>ಮಲೆಮನೆ ಗ್ರಾಮದ ಸಂತ್ರಸ್ತ ಎಂ.ಎನ್.ಅಶ್ವತ್ಥ್ ಮಾತನಾಡಿ, ‘6 ಕುಟುಂಬಗಳು ಭೂಕುಸಿತದಿಂದ ಮನೆ ಮಠ ಕಳೆದುಕೊಂಡಿವೆ. ಮುಖ್ಯಮಂತ್ರಿಯಿಂದ ಹಿಡಿದು ಸಚಿವರಾದಿವರೆಗೆ ಎಲ್ಲರೂ ಬಂದು ಕೇವಲ ಆಶ್ವಾಸನೆ ನೀಡಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ನಾವು ಬಾಡಿಗೆ ಮನೆಗೆ ಬಂದು 10 ತಿಂಗಳು ಕಳೆದಿದ್ದು, ಐದು ತಿಂಗಳ ಬಾಡಿಗೆ ಹಣವನ್ನು ಮಾತ್ರ ಸರ್ಕಾರ ನೀಡಿದೆ. ಈಗ ನಾವು ಅತಂತ್ರರಾಗಿದ್ದೇವೆ. ನಮಗೆ ಪರ್ಯಾಯ ಜಮೀನು ಸಿಗದೇ ಸಂಕಷ್ಟಕ್ಕೀಡಾಗಿದ್ದೇವೆ’ ಎಂದು ಅಳಲು ತೋಡಿಕೊಂಡರು.</p>.<p>‘ಪರ್ಯಾಯ ಜಮೀನಿಗೆ ಮಲೆ ನಾಡು ಭಾಗದಲ್ಲಿ ಜಾಗದ ಸಮಸ್ಯೆ ಯಿದೆ. ಬಯಲುಸೀಮೆ ಕಡೂರು ಸುತ್ತಮುತ್ತ ಪ್ರದೇಶಗಳಲ್ಲಿ ಜಮೀನು ಇದೆ. ಆದರೆ, ಅಲ್ಲಿಗೆ ಹೋಗಲು ಒಪ್ಪಿದರೆ ನಾವು ಶಿಫಾರಸು ಮಾಡುತ್ತೇವೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ವಿವಿಧ ಕಂದಾಯ, ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು’ ಎಂದು ಆಶೀಸರ ಹೇಳಿದರು.</p>.<p>ಭೂಕುಸಿತ ಪ್ರದೇಶಗಳಲ್ಲಿ ಒಂದೊಂದು ಗಿಡ ನೆಡುವ ಮೂಲಕ ಪರಿಸರ ಉಳಿಸುವ ಜಾಗೃತಿ ಮೂಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟಿಗೆಹಾರ: </strong>ಹೋದ ವರ್ಷ ಅತಿವೃಷ್ಟಿಯಿಂದ ಮಲೆನಾಡಿನಲ್ಲಿ ಭೂಕುಸಿತ ಸಂಭವಿಸಿದ್ದ ಚೆನ್ನಹಡ್ಲು, ದೇವನಗೂಲ್ ಗುಡ್ಡ, ಸುಂದರಬೈಲ್, ಬಾಳೂರು ಹೊರಟ್ಟಿ, ಮಲೆಮನೆ, ಮಧುಗುಂಡಿ ಗ್ರಾಮಗಳಿಗೆ ಉನ್ನತ ಮಟ್ಟದ ಅಧ್ಯಯನ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಶನಿವಾರ ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ‘ಭೂಕುಸಿತವಾದ ಪ್ರದೇಶದ ಬಗ್ಗೆ ಅಧ್ಯಯನಕ್ಕೆ ಸಮಿತಿಯನ್ನು ಸರ್ಕಾರ ನಿಯುಕ್ತಿ ಮಾಡಿದೆ. ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ, ಪಾರಿಸಾರಿಕ ದುಷ್ಪರಿಣಾಮಗಳನ್ನು ಕಂಡು ಹಿಡಿದು, ಮುಂದೆ ತಡೆಯುವ ಬಗ್ಗೆ ಸಮಾ ಲೋಚನೆ ಮಾಡಲಾಗುತ್ತದೆ. ಈ ಹಿಂದೆ ನಡೆದಿರುವ ಅಧ್ಯಯನದ ಬಗ್ಗೆಯೂ ಮಾಹಿತಿ ಕಲೆ ಹಾಕಿ, ಈ ಪ್ರದೇಶದ ಸ್ಥಾನಿಕ ವಿಭಾಗೀಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದರು.</p>.<p>ಮಲೆಮನೆ ಗ್ರಾಮದ ಸಂತ್ರಸ್ತ ಎಂ.ಎನ್.ಅಶ್ವತ್ಥ್ ಮಾತನಾಡಿ, ‘6 ಕುಟುಂಬಗಳು ಭೂಕುಸಿತದಿಂದ ಮನೆ ಮಠ ಕಳೆದುಕೊಂಡಿವೆ. ಮುಖ್ಯಮಂತ್ರಿಯಿಂದ ಹಿಡಿದು ಸಚಿವರಾದಿವರೆಗೆ ಎಲ್ಲರೂ ಬಂದು ಕೇವಲ ಆಶ್ವಾಸನೆ ನೀಡಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ನಾವು ಬಾಡಿಗೆ ಮನೆಗೆ ಬಂದು 10 ತಿಂಗಳು ಕಳೆದಿದ್ದು, ಐದು ತಿಂಗಳ ಬಾಡಿಗೆ ಹಣವನ್ನು ಮಾತ್ರ ಸರ್ಕಾರ ನೀಡಿದೆ. ಈಗ ನಾವು ಅತಂತ್ರರಾಗಿದ್ದೇವೆ. ನಮಗೆ ಪರ್ಯಾಯ ಜಮೀನು ಸಿಗದೇ ಸಂಕಷ್ಟಕ್ಕೀಡಾಗಿದ್ದೇವೆ’ ಎಂದು ಅಳಲು ತೋಡಿಕೊಂಡರು.</p>.<p>‘ಪರ್ಯಾಯ ಜಮೀನಿಗೆ ಮಲೆ ನಾಡು ಭಾಗದಲ್ಲಿ ಜಾಗದ ಸಮಸ್ಯೆ ಯಿದೆ. ಬಯಲುಸೀಮೆ ಕಡೂರು ಸುತ್ತಮುತ್ತ ಪ್ರದೇಶಗಳಲ್ಲಿ ಜಮೀನು ಇದೆ. ಆದರೆ, ಅಲ್ಲಿಗೆ ಹೋಗಲು ಒಪ್ಪಿದರೆ ನಾವು ಶಿಫಾರಸು ಮಾಡುತ್ತೇವೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ವಿವಿಧ ಕಂದಾಯ, ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು’ ಎಂದು ಆಶೀಸರ ಹೇಳಿದರು.</p>.<p>ಭೂಕುಸಿತ ಪ್ರದೇಶಗಳಲ್ಲಿ ಒಂದೊಂದು ಗಿಡ ನೆಡುವ ಮೂಲಕ ಪರಿಸರ ಉಳಿಸುವ ಜಾಗೃತಿ ಮೂಡಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>