ಪಕ್ಷದಲ್ಲಿ ಅನೇಕ ವರ್ಷಗಳಿಂದ ಕೆಲಸ ಮಾಡಿದ್ದೇನೆ. ಬೆಂಗಳೂರಿನ ಜಿಲ್ಲಾಧ್ಯಕ್ಷ, ಯುವ ಘಟಕ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ. ಈ ಅನುಭವಗಳೊಂದಿಗೆ ಪಕ್ಷ ಸಂಘಟನೆ ಮಾಡುತ್ತೇನೆ. ಕಾರ್ಯಾಧ್ಯಕ್ಷರಾಗಿ ನೇಮಕವಾಗಿರುವ ಈಶ್ವರ ಖಂಡ್ರೆ, ಪಕ್ಷದ ವರಿಷ್ಠರು ಎಲ್ಲರೂ ಒಗ್ಗೂಡಿ ಪಕ್ಷ ಸಂಘಟನೆ ಮಾಡುತ್ತೇವೆ. ಪಕ್ಷದ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.
ಪತ್ನಿ ಟಬು ಮಾತನಾಡಿ, ‘ದಿನೇಶ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿರುವುದು ಬಹಳ ಖುಷಿಯಾಗಿದೆ. ಅವರ ಎಲ್ಲ ಕಾರ್ಯಗಳಿಗೆ ಸದಾ ಬೆಂಬಲವಾಗಿ ಇರುತ್ತೇನೆ’ ಎಂದರು.ಪುತ್ರಿಯರಾದ ಅಮೀರಾ, ಅನನ್ಯಾ ಜತೆಗಿದ್ದರು.