<p><strong>ನರಸಿಂಹರಾಜಪುರ (ಚಿಕ್ಕಮಗಳೂರು):</strong> ‘ಕೆಪಿಎಸ್ ಶಾಲೆಗಳಿಂದಾಗಿ ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳು ಮುಚ್ಚುತ್ತವೆ ಎಂಬುದು ತಪ್ಪು ಕಲ್ಪನೆ’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>‘ಬರಗೂರು ರಾಮಚಂದ್ರಪ್ಪ ಅವರು ‘ಪ್ರಜಾವಾಣಿ’ಯಲ್ಲಿ ಬರೆದಿರುವ ಲೇಖನ ಓದಿದ್ದೇನೆ. ಕೆಪಿಎಸ್ ಶಾಲೆ ಸ್ಥಾಪನೆ ಮಾಡಿದಲ್ಲಿ ಯಾವುದೇ ಹಳ್ಳಿಯ ಸರ್ಕಾರಿ ಶಾಲೆ ಮುಚ್ಚುವುದಿಲ್ಲ. ಒಳ್ಳೆಯ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವುದೇ ತಪ್ಪೇ’ ಎಂದು ಅವರು ಪ್ರಶ್ನಿಸಿದರು.</p>.<p>ಎಸ್ಎಸ್ಎಲ್ಸಿ ಉತ್ತೀರ್ಣದ ಅಂಕವನ್ನು 33ಕ್ಕೆ ಇಳಿಸಿದ್ದರಿಂದ ಶಿಕ್ಷಣದ ಗುಣಮಟ್ಟ ಕುಗ್ಗದು. ಅಂಕ ಇಳಿಕೆಗೂ ಶಿಕ್ಷಣದ ಗುಣಮಟ್ಟಕ್ಕೂ ಸಂಬಂಧವಿಲ್ಲ. 625ಕ್ಕೆ 625 ಅಂಕ ಪಡೆಯುವ ವಿದ್ಯಾರ್ಥಿಗಳೂ ಇರುತ್ತಾರೆ. ಕೇರಳ, ಮೀಜೋರಾಂ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣದ ಅಂಕ 30 ಇದೆ ಎಂದರು.</p>.<p>‘ಕೇರಳಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣರಾದ ಬಹಳಷ್ಟು ವಿದ್ಯಾರ್ಥಿಗಳು ಕರ್ನಾಟಕದಲ್ಲಿ ಶುಶ್ರೂಷಕಿಯರ ಹುದ್ದೆಗೆ ಆಯ್ಕೆಯಾಗುತ್ತಿದ್ದಾರೆ. ರಾಜ್ಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಬೇಕಲ್ಲವೇ, ಉದ್ಯೋಗ ಕೊಡುವುದರಿಂದ ಕುಟುಂಬದ ನಿರ್ವಹಣೆ ಸುಲಭವಾಗುತ್ತದೆ’ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ (ಚಿಕ್ಕಮಗಳೂರು):</strong> ‘ಕೆಪಿಎಸ್ ಶಾಲೆಗಳಿಂದಾಗಿ ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳು ಮುಚ್ಚುತ್ತವೆ ಎಂಬುದು ತಪ್ಪು ಕಲ್ಪನೆ’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>‘ಬರಗೂರು ರಾಮಚಂದ್ರಪ್ಪ ಅವರು ‘ಪ್ರಜಾವಾಣಿ’ಯಲ್ಲಿ ಬರೆದಿರುವ ಲೇಖನ ಓದಿದ್ದೇನೆ. ಕೆಪಿಎಸ್ ಶಾಲೆ ಸ್ಥಾಪನೆ ಮಾಡಿದಲ್ಲಿ ಯಾವುದೇ ಹಳ್ಳಿಯ ಸರ್ಕಾರಿ ಶಾಲೆ ಮುಚ್ಚುವುದಿಲ್ಲ. ಒಳ್ಳೆಯ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವುದೇ ತಪ್ಪೇ’ ಎಂದು ಅವರು ಪ್ರಶ್ನಿಸಿದರು.</p>.<p>ಎಸ್ಎಸ್ಎಲ್ಸಿ ಉತ್ತೀರ್ಣದ ಅಂಕವನ್ನು 33ಕ್ಕೆ ಇಳಿಸಿದ್ದರಿಂದ ಶಿಕ್ಷಣದ ಗುಣಮಟ್ಟ ಕುಗ್ಗದು. ಅಂಕ ಇಳಿಕೆಗೂ ಶಿಕ್ಷಣದ ಗುಣಮಟ್ಟಕ್ಕೂ ಸಂಬಂಧವಿಲ್ಲ. 625ಕ್ಕೆ 625 ಅಂಕ ಪಡೆಯುವ ವಿದ್ಯಾರ್ಥಿಗಳೂ ಇರುತ್ತಾರೆ. ಕೇರಳ, ಮೀಜೋರಾಂ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣದ ಅಂಕ 30 ಇದೆ ಎಂದರು.</p>.<p>‘ಕೇರಳಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣರಾದ ಬಹಳಷ್ಟು ವಿದ್ಯಾರ್ಥಿಗಳು ಕರ್ನಾಟಕದಲ್ಲಿ ಶುಶ್ರೂಷಕಿಯರ ಹುದ್ದೆಗೆ ಆಯ್ಕೆಯಾಗುತ್ತಿದ್ದಾರೆ. ರಾಜ್ಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಬೇಕಲ್ಲವೇ, ಉದ್ಯೋಗ ಕೊಡುವುದರಿಂದ ಕುಟುಂಬದ ನಿರ್ವಹಣೆ ಸುಲಭವಾಗುತ್ತದೆ’ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>