2015ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ಫೂರ್ತಿಗೊಂಡು ಪ್ರತಿ ಹೋಬಳಿಯಲ್ಲಿ ಕೃಷಿ ಯಂತ್ರಧಾರೆ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿತ್ತು. ಬಿತ್ತನೆಯಿಂದ ಕೊಯ್ಲಿನ ವರೆಗೆ ಅಗತ್ಯವಿರುವ ಸಲಕರಣೆಗಳು ಇದರಲ್ಲಿ ಲಭ್ಯವಾಗುತ್ತಿವೆ. ಸೇವಾಕೇಂದ್ರಗಳನ್ನು ಏಜೆನ್ಸಿಗಳ ಮೂಲಕ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿತ್ತು. ಕಡೂರು ತಾಲ್ಲೂಕಿನ 8 ಹೋಬಳಿಗಳಲ್ಲಿ ಸೇವಾ ಕೇಂದ್ರಗಳಿವೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ರೈತರ ಸಭೆ ನಡೆಸಿ ಬಾಡಿಗೆ ದರ ನಿಗದಿಪಡಿಸಲಾಗಿದೆ. ಬೀರೂರು ಹೋಬಳಿಯಲ್ಲಿ ಚಿತ್ರದುರ್ಗ ಮೂಲದ ವರ್ಷಾ ಅಗ್ರಿ ಬಿಸಿನೆಸ್ ಸೆಂಟರ್ ಸೇವಾಕೇಂದ್ರ ಸ್ಥಾಪಿಸಿದೆ. ಆದರೆ ಈ ಕೇಂದ್ರ ಸದಾ ಮುಚ್ಚಿರುತ್ತದೆ ಎನ್ನುವುದು ರೈತರ ಆರೋಪ.