ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕೋರನಹಳ್ಳಿಯ ಸಮೀಪ ಶನಿವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಮತ್ತು ಅಪೆ ಆಟೊ ಡಿಕ್ಕಿಯಾಗಿ ಆಟೊ ಚಾಲಕ ಮಂಜುನಾಥ್ (32) ಮೃತಪಟ್ಟಿದ್ದಾರೆ.
ಮಂಜುನಾಥ್ ಅವರು ತರೀಕೆರೆ ತಾಲ್ಲೂಕಿನ ಗೇರಮರಡಿ ಗ್ರಾಮದವರು.
ಬೀರೂರು ಕಡೆಗೆ ಸಾಗುತ್ತಿದ್ದ ಬಸ್ ಮತ್ತು ತರೀಕೆರೆ ಕಡೆಗೆ ಸಂಚರಿಸುತ್ತಿದ್ದ ಆಟೊ ಮುಖಾಮುಖಿ ಡಿಕ್ಕಿಹೊಡೆದಿವೆ. ಅವಘಡದಲ್ಲಿ ಆಟೊ ಮತ್ತು ಬಸ್ ಜಖಂ ಆಗಿವೆ.
ಬೀರೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.