<p><strong>ನರಸಿಂಹರಾಜಪುರ: </strong>ಶೃಂಗೇರಿಯಿಂದ ತರೀಕೆರೆ ಭಾಗಕ್ಕೆ ಕೆಎಸ್ಆರ್ಟಿಸಿ ಬಸ್ ಬಿಡಬೇಕೆಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.</p>.<p>ಈ ಹಿಂದೆ ಶೃಂಗೇರಿಯಿಂದ ಕೊಪ್ಪ, ಎನ್.ಆರ್.ಪುರ, ಬಿ.ಆರ್.ಪ್ರಾಜೆಕ್ಟ್, ತರೀಕೆರೆ, ಬೀರೂರು, ಕಡೂರು ಮೂಲಕ ಬೆಂಗಳೂರಿಗೆ ಹೋಗುವ ಹಾಗೂ ಬೆಳಿಗ್ಗೆ ಬೆಂಗಳೂರಿನಿಂದ ಈ ಭಾಗಕ್ಕೆ ಬರುವ ಕೆಎಸ್ಆರ್ಟಿಸಿ ಬಸ್ ಸಂಚಾರವಿತ್ತು. ಇದರಿಂದಾಗಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವ ವಿದ್ಯಾಲಯಕ್ಕೆ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಅಲ್ಲದೆ, ತರೀಕೆರೆ ಯಲ್ಲಿರುವ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಹೋಗಲು, ಬೆಂಗಳೂರು ಮುಂತಾದ ಭಾಗಗಳಿಗೂ ತೆರಳಲು ಅನುಕೂಲವಾಗಿತ್ತು.</p>.<p>ಪ್ರಸ್ತುತ ಈ ಬಸ್ ಸಂಚಾರ ಪ್ರಸ್ತುತ ಸ್ಥಗಿತಗೊಂಡಿದೆ. ಶೃಂಗೇರಿಯಿಂದ ತರೀಕೆರೆ ಮಾರ್ಗವಾಗಿ ಅಜ್ಜಂಪುರ ಮತ್ತು ಬೀರೂರಿಗೆ ಹೋಗುತ್ತಿದ್ದ ಸಹಕಾರ ಸಾರಿಗೆ ಬಸ್ ಸಂಚಾರವೂ ಸ್ಥಗಿತಗೊಳಿಸಿರುವುದರಿಂದ ಈ ಭಾಗಗಳಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೋಗಬೇಕಾದರೆ ಲಕ್ಕಿನಕೊಪ್ಪ ಗ್ರಾಮಕ್ಕೆ ಹೋಗಿ ಖಾಸಗಿ ಬಸ್ ಮೂಲಕ ಸಂಚರಿಸಬೇಕು. ಇಲ್ಲವೇ ಶಿವಮೊಗ್ಗದ ಮೂಲಕ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ.</p>.<p>ಈ ಹಿಂದೆ ಶೃಂಗೇರಿಯಿಂದ ಬೆಂಗಳೂರಿಗೆ ಬೆಳಿಗ್ಗೆ ವೇಳೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾ ಲಯಕ್ಕೆ ವ್ಯಾಸಂಕ್ಕೆ ಹೋಗಿ, ಬರಲು ಸಾರ್ವಜನಿಕರು ವ್ಯಾಪಾರ ವ್ಯವಹಾರಕ್ಕೆ ತರೀಕೆರೆ, ಕಡೂರು, ಬೆಂಗಳೂರಿಗೆ ಹೋಗಲು ಅನುಕೂಲವಾಗಿತ್ತು. ಇದು ಸ್ಥಗಿತಗೊಳಿಸಿರುವುದರಿಂದ ಸಮಸ್ಯೆಯಾಗಿದ್ದು, ಈ ಬಸ್ ಸೇವೆ ಮತ್ತೆ ಆರಂಭಿಸಿದರೆ ಅನುಕೂಲವಾಗುತ್ತದೆ ಎನ್ನುತ್ತಾರೆ ರೈತ ಮುಖಂಡ ವಿನಾಯಕ್ ಮಾಳೂರುದಿಣ್ಣೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಸಂಪ ರ್ಕಿಸಿದಾಗ, ‘ಬಸ್ ಸೌಲಭ್ಯ ಕಲ್ಪಿಸುವ ಬಗ್ಗೆ ಪ್ರಯತ್ನಿಸಲಾಗುವುದು’ ಎಂದರು.</p>.<p>‘ಶೃಂಗೇರಿಯಿಂದ ಕೊಪ್ಪ, ಎನ್.ಆರ್.ಪುರ, ತರೀಕೆರೆ, ಕಡೂರು ಭಾಗಕ್ಕೆ ಬಸ್ ಸಂಚಾರ ಆರಂಭಿಸಲು ರಸ್ತೆ ಪರವಾನಗಿ ಲಭಿಸಿಲ್ಲ. ಆರ್ಟಿಒ ಕಚೇರಿಯಿಂದ ಪರವಾನಗಿ ಲಭಿಸಿದರೆ ಬಸ್ ಸೇವೆ ಆರಂಭಿಸಲಾಗುವುದು’ ಎಂದು ಚಿಕ್ಕಮಗಳೂರಿನ ಕೆಎಸ್ ಆರ್ಟಿಸಿ ವಿಭಾಗೀಯ ನಿಯಂತ್ರಣಾ ಧಿಕಾರಿ ವೀರೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ: </strong>ಶೃಂಗೇರಿಯಿಂದ ತರೀಕೆರೆ ಭಾಗಕ್ಕೆ ಕೆಎಸ್ಆರ್ಟಿಸಿ ಬಸ್ ಬಿಡಬೇಕೆಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.</p>.<p>ಈ ಹಿಂದೆ ಶೃಂಗೇರಿಯಿಂದ ಕೊಪ್ಪ, ಎನ್.ಆರ್.ಪುರ, ಬಿ.ಆರ್.ಪ್ರಾಜೆಕ್ಟ್, ತರೀಕೆರೆ, ಬೀರೂರು, ಕಡೂರು ಮೂಲಕ ಬೆಂಗಳೂರಿಗೆ ಹೋಗುವ ಹಾಗೂ ಬೆಳಿಗ್ಗೆ ಬೆಂಗಳೂರಿನಿಂದ ಈ ಭಾಗಕ್ಕೆ ಬರುವ ಕೆಎಸ್ಆರ್ಟಿಸಿ ಬಸ್ ಸಂಚಾರವಿತ್ತು. ಇದರಿಂದಾಗಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವ ವಿದ್ಯಾಲಯಕ್ಕೆ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಅಲ್ಲದೆ, ತರೀಕೆರೆ ಯಲ್ಲಿರುವ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಹೋಗಲು, ಬೆಂಗಳೂರು ಮುಂತಾದ ಭಾಗಗಳಿಗೂ ತೆರಳಲು ಅನುಕೂಲವಾಗಿತ್ತು.</p>.<p>ಪ್ರಸ್ತುತ ಈ ಬಸ್ ಸಂಚಾರ ಪ್ರಸ್ತುತ ಸ್ಥಗಿತಗೊಂಡಿದೆ. ಶೃಂಗೇರಿಯಿಂದ ತರೀಕೆರೆ ಮಾರ್ಗವಾಗಿ ಅಜ್ಜಂಪುರ ಮತ್ತು ಬೀರೂರಿಗೆ ಹೋಗುತ್ತಿದ್ದ ಸಹಕಾರ ಸಾರಿಗೆ ಬಸ್ ಸಂಚಾರವೂ ಸ್ಥಗಿತಗೊಳಿಸಿರುವುದರಿಂದ ಈ ಭಾಗಗಳಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೋಗಬೇಕಾದರೆ ಲಕ್ಕಿನಕೊಪ್ಪ ಗ್ರಾಮಕ್ಕೆ ಹೋಗಿ ಖಾಸಗಿ ಬಸ್ ಮೂಲಕ ಸಂಚರಿಸಬೇಕು. ಇಲ್ಲವೇ ಶಿವಮೊಗ್ಗದ ಮೂಲಕ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ.</p>.<p>ಈ ಹಿಂದೆ ಶೃಂಗೇರಿಯಿಂದ ಬೆಂಗಳೂರಿಗೆ ಬೆಳಿಗ್ಗೆ ವೇಳೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾ ಲಯಕ್ಕೆ ವ್ಯಾಸಂಕ್ಕೆ ಹೋಗಿ, ಬರಲು ಸಾರ್ವಜನಿಕರು ವ್ಯಾಪಾರ ವ್ಯವಹಾರಕ್ಕೆ ತರೀಕೆರೆ, ಕಡೂರು, ಬೆಂಗಳೂರಿಗೆ ಹೋಗಲು ಅನುಕೂಲವಾಗಿತ್ತು. ಇದು ಸ್ಥಗಿತಗೊಳಿಸಿರುವುದರಿಂದ ಸಮಸ್ಯೆಯಾಗಿದ್ದು, ಈ ಬಸ್ ಸೇವೆ ಮತ್ತೆ ಆರಂಭಿಸಿದರೆ ಅನುಕೂಲವಾಗುತ್ತದೆ ಎನ್ನುತ್ತಾರೆ ರೈತ ಮುಖಂಡ ವಿನಾಯಕ್ ಮಾಳೂರುದಿಣ್ಣೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಸಂಪ ರ್ಕಿಸಿದಾಗ, ‘ಬಸ್ ಸೌಲಭ್ಯ ಕಲ್ಪಿಸುವ ಬಗ್ಗೆ ಪ್ರಯತ್ನಿಸಲಾಗುವುದು’ ಎಂದರು.</p>.<p>‘ಶೃಂಗೇರಿಯಿಂದ ಕೊಪ್ಪ, ಎನ್.ಆರ್.ಪುರ, ತರೀಕೆರೆ, ಕಡೂರು ಭಾಗಕ್ಕೆ ಬಸ್ ಸಂಚಾರ ಆರಂಭಿಸಲು ರಸ್ತೆ ಪರವಾನಗಿ ಲಭಿಸಿಲ್ಲ. ಆರ್ಟಿಒ ಕಚೇರಿಯಿಂದ ಪರವಾನಗಿ ಲಭಿಸಿದರೆ ಬಸ್ ಸೇವೆ ಆರಂಭಿಸಲಾಗುವುದು’ ಎಂದು ಚಿಕ್ಕಮಗಳೂರಿನ ಕೆಎಸ್ ಆರ್ಟಿಸಿ ವಿಭಾಗೀಯ ನಿಯಂತ್ರಣಾ ಧಿಕಾರಿ ವೀರೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>