ಈ ಹಿಂದೆ ಶೃಂಗೇರಿಯಿಂದ ಕೊಪ್ಪ, ಎನ್.ಆರ್.ಪುರ, ಬಿ.ಆರ್.ಪ್ರಾಜೆಕ್ಟ್, ತರೀಕೆರೆ, ಬೀರೂರು, ಕಡೂರು ಮೂಲಕ ಬೆಂಗಳೂರಿಗೆ ಹೋಗುವ ಹಾಗೂ ಬೆಳಿಗ್ಗೆ ಬೆಂಗಳೂರಿನಿಂದ ಈ ಭಾಗಕ್ಕೆ ಬರುವ ಕೆಎಸ್ಆರ್ಟಿಸಿ ಬಸ್ ಸಂಚಾರವಿತ್ತು. ಇದರಿಂದಾಗಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವ ವಿದ್ಯಾಲಯಕ್ಕೆ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಅಲ್ಲದೆ, ತರೀಕೆರೆ ಯಲ್ಲಿರುವ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಹೋಗಲು, ಬೆಂಗಳೂರು ಮುಂತಾದ ಭಾಗಗಳಿಗೂ ತೆರಳಲು ಅನುಕೂಲವಾಗಿತ್ತು.