<p><strong>ಮೂಡಿಗೆರೆ</strong>: ಪಟ್ಟಣದ ಬಸ್ ನಿಲ್ದಾಣದಿಂದ ಪ್ರತಿದಿನ ಸಂಜೆ 6.45 ಕ್ಕೆ ಗುತ್ತಿಹಳ್ಳಿಗೆ ಸಂಚರಿರಸುವ ಕೆಎಸ್ಆರ್ಟಿಸಿ ಬಸ್ ಸಮಯಕ್ಕೆ ಸರಿಯಾಗಿ ಬಸ್ ಸ್ಟ್ಯಾಂಡಿಗೆ ಬರುವುದಿಲ್ಲ. ಹೀಗಾಗಿ, ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.</p>.<p>ರಾತ್ರಿ 8 ಗಂಟೆಯಾದರೂ ಬಿದರಹಳ್ಳಿಯ ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರಲ್ಲ. ನಿಯಂತ್ರಕರು, ಘಟಕ ವ್ಯವಸ್ಥಾಪಕರನ್ನು ವಿಚಾರಿಸಿದರೆ ಬರುತ್ತೆ... ಬರುತ್ತೆ.. ಬಸ್ ಡಿಪೋದಲ್ಲಿದೆ, ನಿರ್ವಾಹಕ, ಚಾಲಕ ಇಲ್ಲ. ಅವರನ್ನು ವ್ಯವಸ್ಥೆ ಮಾಡ್ತಾ ಇದ್ದೀವಿ, ಕಾಯ್ತಾ ಇರಿ! ಎಂಬ ಸಿದ್ಧ ಉತ್ತರ ನೀಡುತ್ತಾರೆ.</p>.<p>ಬಸ್ ಬರುವುದು ತುಂಬಾ ಹೊತ್ತಾಗಬಹುದು ಅಥವಾ ಬಾರದೆಯೂ ಇರಬಹುದು ಎಂದು ಪ್ರಯಾಣಿಕರು ಖಾಸಗಿ ವಾಹನಗಳಲ್ಲಿ ಊರು ತಲುಪುವುದು ಮಾಮೂಲಿಯಾಗಿದೆ. ಈ ವಾಹನಗಳಲ್ಲಿ ದುಪ್ಪಟ್ಟು ಹಣ ತೆರಬೇಕು.</p>.<p>ಈ ಮಾರ್ಗಕ್ಕೆ ಪ್ರಯಾಣಿಕರೇ ಇರೊಲ್ಲ, ಬಸ್ ಬಿಡುವುದು ಹೇಗೆ ಎಂದು ಕೆಲ ಅಧಿಕಾರಿಗಳು ಹೇಳುತ್ತಾರೆ. ಪ್ರಯಾಣಿಕರು ಈಚೆಗೆ ಬಸ್ ಘಟಕಕ್ಕೆ ತೆರಳಿ ಸಂಕಷ್ಟವನ್ನು ಅಧಿಕಾರಿಗಳಿಗೆ ಮನದಟ್ಟು ಮಾಡುವ ಪ್ರಯತ್ನ ಮಾಡಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಸಂಬಂಧಪಟ್ಟವರು ಎಂದು ಜನರು ಒತ್ತಾಯಿಸಿದ್ದಾರೆ.</p>.<p>- ಡಾ.ಸಂಪತ್ ಬೆಟ್ಟಗೆರೆ, ಪ್ರಯಾಣಿಕರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ಪಟ್ಟಣದ ಬಸ್ ನಿಲ್ದಾಣದಿಂದ ಪ್ರತಿದಿನ ಸಂಜೆ 6.45 ಕ್ಕೆ ಗುತ್ತಿಹಳ್ಳಿಗೆ ಸಂಚರಿರಸುವ ಕೆಎಸ್ಆರ್ಟಿಸಿ ಬಸ್ ಸಮಯಕ್ಕೆ ಸರಿಯಾಗಿ ಬಸ್ ಸ್ಟ್ಯಾಂಡಿಗೆ ಬರುವುದಿಲ್ಲ. ಹೀಗಾಗಿ, ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.</p>.<p>ರಾತ್ರಿ 8 ಗಂಟೆಯಾದರೂ ಬಿದರಹಳ್ಳಿಯ ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರಲ್ಲ. ನಿಯಂತ್ರಕರು, ಘಟಕ ವ್ಯವಸ್ಥಾಪಕರನ್ನು ವಿಚಾರಿಸಿದರೆ ಬರುತ್ತೆ... ಬರುತ್ತೆ.. ಬಸ್ ಡಿಪೋದಲ್ಲಿದೆ, ನಿರ್ವಾಹಕ, ಚಾಲಕ ಇಲ್ಲ. ಅವರನ್ನು ವ್ಯವಸ್ಥೆ ಮಾಡ್ತಾ ಇದ್ದೀವಿ, ಕಾಯ್ತಾ ಇರಿ! ಎಂಬ ಸಿದ್ಧ ಉತ್ತರ ನೀಡುತ್ತಾರೆ.</p>.<p>ಬಸ್ ಬರುವುದು ತುಂಬಾ ಹೊತ್ತಾಗಬಹುದು ಅಥವಾ ಬಾರದೆಯೂ ಇರಬಹುದು ಎಂದು ಪ್ರಯಾಣಿಕರು ಖಾಸಗಿ ವಾಹನಗಳಲ್ಲಿ ಊರು ತಲುಪುವುದು ಮಾಮೂಲಿಯಾಗಿದೆ. ಈ ವಾಹನಗಳಲ್ಲಿ ದುಪ್ಪಟ್ಟು ಹಣ ತೆರಬೇಕು.</p>.<p>ಈ ಮಾರ್ಗಕ್ಕೆ ಪ್ರಯಾಣಿಕರೇ ಇರೊಲ್ಲ, ಬಸ್ ಬಿಡುವುದು ಹೇಗೆ ಎಂದು ಕೆಲ ಅಧಿಕಾರಿಗಳು ಹೇಳುತ್ತಾರೆ. ಪ್ರಯಾಣಿಕರು ಈಚೆಗೆ ಬಸ್ ಘಟಕಕ್ಕೆ ತೆರಳಿ ಸಂಕಷ್ಟವನ್ನು ಅಧಿಕಾರಿಗಳಿಗೆ ಮನದಟ್ಟು ಮಾಡುವ ಪ್ರಯತ್ನ ಮಾಡಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಸಂಬಂಧಪಟ್ಟವರು ಎಂದು ಜನರು ಒತ್ತಾಯಿಸಿದ್ದಾರೆ.</p>.<p>- ಡಾ.ಸಂಪತ್ ಬೆಟ್ಟಗೆರೆ, ಪ್ರಯಾಣಿಕರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>