ಬಸ್ ಅಪಘಾತ ನಡೆದ ಸ್ಥಳದಿಂದ ಕೊಟ್ಟಿಗೆಹಾರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೆಲವು ಪ್ರಯಾಣಿಕರು ಬಸ್ನಿಂದ ಇಳಿದು 10 ಕಿ.ಮೀ. ನಡೆದು ಕೊಟ್ಟಿಗೆಹಾರ ಸೇರಿದರು. ಬಣಕಲ್ ಸಬ್ಇನ್ಸ್ಪೆಕ್ಟರ್ ಜಂಬೂರಾಜ್ ಮಹಾಜನ್, ಹೆದ್ದಾರಿ ಗಸ್ತು ವಿಭಾಗದ ಸಬ್ಇನ್ಸ್ಪೆಕ್ಟರ್ ಹೇಮಾ, ಎಎಸ್ಐ ಟಿ.ಕೆ.ಶಶಿ, ಪೊಲೀಸ್ ಸಿಬ್ಬಂದಿ, ಸಮಾಜ ಸೇವಕ ಮೊಹಮ್ಮದ್ ಆರೀಫ್, ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡಿ, ಅಪಘಾತಕ್ಕೀಡಾದ ಬಸ್ಗಳನ್ನು ರಸ್ತೆಯಿಂದ ತೆರವುಗೊಳಿಸುವಲ್ಲಿ ಸಹಕರಿಸಿದರು.