<p><strong>ಚಿಕ್ಕಮಗಳೂರು:</strong> ಭೂಸ್ವಾಧೀನ ಪಡಿಸಿಕೊಂಡು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 1.35 ಎಕರೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂದು ನಗರಸಭೆ ಸದಸ್ಯ ಎ.ಸಿ.ಕುಮಾರಗೌಡ ಒತ್ತಾಯಿಸಿದರು.</p>.<p>ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದ ಸರ್ವೆ ನಂ. 6ರಲ್ಲಿ 1 ಎಕರೆ 35 ಗುಂಟೆ ಪ್ರದೇಶವು ಸರ್ಕಾರಕ್ಕೆ ಸೇರಿದ ಇನಾಂ ಭೂಮಿಯಾಗಿದೆ. ಈ ಜಾಗವನ್ನು ಕಂದಾಯ ಇಲಾಖೆಯ ಕೆಲ ಅಧಿಕಾರಿಗಳು ಶಾಮೀಲಾಗಿ ಖಾಸಗಿಯವರಿಗೆ ಮಾರಾಟ ಮಾಡಿದ್ದು, ಈಗ ಅಲ್ಲಿ ಬಡಾವಣೆ ನಿರ್ಮಾಣವಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>ಹಿಂದೆ ಮೈಸೂರು ರಾಜ್ಯದ ಆಡಳಿತದಲ್ಲಿ ಸಗುನಯ್ಯ ಎಂಬುವರು ಸಾಗುವಳಿ ಮಾಡಿಕೊಂಡಿದ್ದರು. 1964ರಲ್ಲಿ ಭೂಸ್ವಾಧೀನವಾಗಿದ್ದು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ನೀಡಲಾಗಿದೆ. ಸಗುನಯ್ಯ ಅವರಿಗೆ ₹12,250 ಪರಿಹಾರ ನೀಡಲಾಗಿದೆ ಎಂದು ಹೇಳಿದರು.</p>.<p>ಆದರೆ, ಸಗುನಯ್ಯ ಅವರೇ ವಾರಸುದಾರರು ಎಂದು ಹೇಳಿಕೊಂಡು ಕೆಲವರು ಈ ಸ್ವತ್ತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಮುಚ್ಚಿಟ್ಟು, ವಸತಿ ಬಡಾವಣೆಗೆ ಭೂ ಪರಿವರ್ತನೆ ಪಡೆದಿದ್ದಾರೆ. ಈ ಕೃತ್ಯದಲ್ಲಿ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು, ತಹಸೀಲ್ದಾರ್ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.</p>.<p>ಕೂಡಲೇ ಬಡಾವಣೆ ನಿರ್ಮಾಣ ಕಾಮಗಾರಿ ತಡೆ ಹಿಡಿದು ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ನಗರಸಭೆ ಸದಸ್ಯ ಗೋಪಿ, ದಿನೇಶ್, ಮುಖಂಡರಾದ ಇರ್ಷಾದ್ ಅಹಮದ್, ಸಿ.ಕೆ.ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಭೂಸ್ವಾಧೀನ ಪಡಿಸಿಕೊಂಡು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 1.35 ಎಕರೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂದು ನಗರಸಭೆ ಸದಸ್ಯ ಎ.ಸಿ.ಕುಮಾರಗೌಡ ಒತ್ತಾಯಿಸಿದರು.</p>.<p>ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದ ಸರ್ವೆ ನಂ. 6ರಲ್ಲಿ 1 ಎಕರೆ 35 ಗುಂಟೆ ಪ್ರದೇಶವು ಸರ್ಕಾರಕ್ಕೆ ಸೇರಿದ ಇನಾಂ ಭೂಮಿಯಾಗಿದೆ. ಈ ಜಾಗವನ್ನು ಕಂದಾಯ ಇಲಾಖೆಯ ಕೆಲ ಅಧಿಕಾರಿಗಳು ಶಾಮೀಲಾಗಿ ಖಾಸಗಿಯವರಿಗೆ ಮಾರಾಟ ಮಾಡಿದ್ದು, ಈಗ ಅಲ್ಲಿ ಬಡಾವಣೆ ನಿರ್ಮಾಣವಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>ಹಿಂದೆ ಮೈಸೂರು ರಾಜ್ಯದ ಆಡಳಿತದಲ್ಲಿ ಸಗುನಯ್ಯ ಎಂಬುವರು ಸಾಗುವಳಿ ಮಾಡಿಕೊಂಡಿದ್ದರು. 1964ರಲ್ಲಿ ಭೂಸ್ವಾಧೀನವಾಗಿದ್ದು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ನೀಡಲಾಗಿದೆ. ಸಗುನಯ್ಯ ಅವರಿಗೆ ₹12,250 ಪರಿಹಾರ ನೀಡಲಾಗಿದೆ ಎಂದು ಹೇಳಿದರು.</p>.<p>ಆದರೆ, ಸಗುನಯ್ಯ ಅವರೇ ವಾರಸುದಾರರು ಎಂದು ಹೇಳಿಕೊಂಡು ಕೆಲವರು ಈ ಸ್ವತ್ತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಮುಚ್ಚಿಟ್ಟು, ವಸತಿ ಬಡಾವಣೆಗೆ ಭೂ ಪರಿವರ್ತನೆ ಪಡೆದಿದ್ದಾರೆ. ಈ ಕೃತ್ಯದಲ್ಲಿ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು, ತಹಸೀಲ್ದಾರ್ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.</p>.<p>ಕೂಡಲೇ ಬಡಾವಣೆ ನಿರ್ಮಾಣ ಕಾಮಗಾರಿ ತಡೆ ಹಿಡಿದು ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ನಗರಸಭೆ ಸದಸ್ಯ ಗೋಪಿ, ದಿನೇಶ್, ಮುಖಂಡರಾದ ಇರ್ಷಾದ್ ಅಹಮದ್, ಸಿ.ಕೆ.ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>