<p><strong>ಚಿಕ್ಕಮಗಳೂರು</strong>: ಭಾಷೆ ಒಂದು ಭಾವ ಶಕ್ತಿ. ಅದನ್ನು ಅಭಿವ್ಯಕ್ತಿ ಮಾಡಿ ಲೋಕಕ್ಕೆ ಪರಿಚಯಿಸುವ ಕೆಲಸವನ್ನು ಬರಹಗಾರರು ಮಾಡುತ್ತಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು.</p>.<p>ಐಐಪಿ ಪ್ರಕಾಶನ, ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ, ಕರ್ನಾಟಕ ವಿಕಾಸ ರಂಗದ ವತಿಯಿಂದ ನಗರದ ಎಂಎಲ್ವಿ ರೋಟರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಹಿತಿ ಕುಂದೂರು ಅಶೋಕ್ ಅವರು ಬರೆದಿರುವ ‘ಪಾಳೆಯಪಟ್ಟು’ ಕಾದಂಬರಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕುಂದೂರು ಅಶೋಕ್ ಅವರ ಈ ಕಾದಂಬರಿ ಐತಿಹಾಸಿಕ ವಿಷಯವೊಂದರ ಸಾಂಸ್ಕೃತಿಕ ಕಥನ. ಐತಿಹಾಸಿಕ ಘಟನೆಗಳನ್ನು ವಸ್ತು ವೈವಿಧ್ಯತೆಯ ಹಿನ್ನೆಲೆಯಲ್ಲಿ ಪರಿಕಲ್ಪನಾತ್ಮಕವಾಗಿ ವಿಸ್ತೃತಗೊಳಿಸಿ ಕಲಾರೂಪ ನೀಡಿದ್ದಾರೆ. ಆದ್ದರಿಂದ ಇದನ್ನು ಐತಿಹಾಸಿಕ ದಾಖಲು ಎಂದು ಓದದೆ ಕಲಾಕೃತಿಯಾಗಿ ಓದಬೇಕಿದೆ ಎಂದರು.</p>.<p>ಸಾಹಿತಿ ಕುಂ.ವೀರಭದ್ರಪ್ಪ ಮಾತನಾಡಿ, ‘ಸಂಘಟನಾ ಚತುರ ಕುಂದೂರು ಅಶೋಕ್ ಅವರು ಇತ್ತೀಚೆಗೆ ಸಾಹಿತ್ಯ ಕ್ಷೇತ್ರದ ಬರವಣಿಗೆಯಲ್ಲಿ ತಮ್ಮನ್ನು ಗಂಭೀರವಾಗಿ ತೊಡಗಿಸಿಕೊಂಡಿದ್ದಾರೆ. ಶತಮಾನಗಳ ಹಿಂದಿನ ಗ್ರಾಮೀಣ ವಾತಾವರಣವನ್ನು ಹಾಗೂ ದೇಸಿ ಸಂಸ್ಕೃತಿಯನ್ನು ಕೃತಿಯುದ್ದಕ್ಕೂ ಕಾವ್ಯಾತ್ಮಕ ಶೈಲಿಯಲ್ಲಿ ನಿರೂಪಿಸಿದ್ದಾರೆ’ ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಲೇಖಕ ಕುಂದೂರು ಅಶೋಕ್, ಪುಸ್ತಕ ಹಾಗೂ ಅಕ್ಷರ ಸಂಸ್ಕೃತಿಯನ್ನು ಜನಮಾನಸಕ್ಕೆ ತಲುಪಿಸಿದರೆ ಸಮ ಸಮಾಜ ಸಾಧ್ಯ ಎಂದರು.</p>.<p>ಅಧ್ಯಕ್ಷತೆ ವಹಿಸಿ ಮಾತನಾಡಿದ ಐಐಪಿ ಪ್ರಕಾಶನದ ವ್ಯವಸ್ಥಾಪಕ ನಂಜೇಶ್ ಬೆಣ್ಣೂರು, ‘ತಮ್ಮ ಸಂಸ್ಥೆಯಿಂದ ಈವರೆಗೂ ಮೂರು ಸಾವಿರ ಪುಸ್ತಕ ಪ್ರಕಟಿಸಲಾಗಿದೆ. ಪುಸ್ತಕ ಸಂಸ್ಕೃತಿಯನ್ನು ನಿರಂತರವಾಗಿ ಹರಡುವ ಕೆಲಸ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ತರೀಕೆರೆಯ ಲೇಖಕ ಮನಸುಳಿ ಮೋಹನ್ ಅವರಿಗೆ ಕುಂಭಕ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಗದೀಶ್ ಮರಾಬೈಲ್ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ, ಸಾಹಿತಿ ಡಿ.ಎಂ. ಮಂಜುನಾಥಸ್ವಾಮಿ, ಮಹೇಶ್ ಹಾದಿಹಳ್ಳಿ, ಹಿರೇಮಗಳೂರು ಪುಟ್ಟಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಭಾಷೆ ಒಂದು ಭಾವ ಶಕ್ತಿ. ಅದನ್ನು ಅಭಿವ್ಯಕ್ತಿ ಮಾಡಿ ಲೋಕಕ್ಕೆ ಪರಿಚಯಿಸುವ ಕೆಲಸವನ್ನು ಬರಹಗಾರರು ಮಾಡುತ್ತಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು.</p>.<p>ಐಐಪಿ ಪ್ರಕಾಶನ, ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ, ಕರ್ನಾಟಕ ವಿಕಾಸ ರಂಗದ ವತಿಯಿಂದ ನಗರದ ಎಂಎಲ್ವಿ ರೋಟರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಹಿತಿ ಕುಂದೂರು ಅಶೋಕ್ ಅವರು ಬರೆದಿರುವ ‘ಪಾಳೆಯಪಟ್ಟು’ ಕಾದಂಬರಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕುಂದೂರು ಅಶೋಕ್ ಅವರ ಈ ಕಾದಂಬರಿ ಐತಿಹಾಸಿಕ ವಿಷಯವೊಂದರ ಸಾಂಸ್ಕೃತಿಕ ಕಥನ. ಐತಿಹಾಸಿಕ ಘಟನೆಗಳನ್ನು ವಸ್ತು ವೈವಿಧ್ಯತೆಯ ಹಿನ್ನೆಲೆಯಲ್ಲಿ ಪರಿಕಲ್ಪನಾತ್ಮಕವಾಗಿ ವಿಸ್ತೃತಗೊಳಿಸಿ ಕಲಾರೂಪ ನೀಡಿದ್ದಾರೆ. ಆದ್ದರಿಂದ ಇದನ್ನು ಐತಿಹಾಸಿಕ ದಾಖಲು ಎಂದು ಓದದೆ ಕಲಾಕೃತಿಯಾಗಿ ಓದಬೇಕಿದೆ ಎಂದರು.</p>.<p>ಸಾಹಿತಿ ಕುಂ.ವೀರಭದ್ರಪ್ಪ ಮಾತನಾಡಿ, ‘ಸಂಘಟನಾ ಚತುರ ಕುಂದೂರು ಅಶೋಕ್ ಅವರು ಇತ್ತೀಚೆಗೆ ಸಾಹಿತ್ಯ ಕ್ಷೇತ್ರದ ಬರವಣಿಗೆಯಲ್ಲಿ ತಮ್ಮನ್ನು ಗಂಭೀರವಾಗಿ ತೊಡಗಿಸಿಕೊಂಡಿದ್ದಾರೆ. ಶತಮಾನಗಳ ಹಿಂದಿನ ಗ್ರಾಮೀಣ ವಾತಾವರಣವನ್ನು ಹಾಗೂ ದೇಸಿ ಸಂಸ್ಕೃತಿಯನ್ನು ಕೃತಿಯುದ್ದಕ್ಕೂ ಕಾವ್ಯಾತ್ಮಕ ಶೈಲಿಯಲ್ಲಿ ನಿರೂಪಿಸಿದ್ದಾರೆ’ ಎಂದು ಹೇಳಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಲೇಖಕ ಕುಂದೂರು ಅಶೋಕ್, ಪುಸ್ತಕ ಹಾಗೂ ಅಕ್ಷರ ಸಂಸ್ಕೃತಿಯನ್ನು ಜನಮಾನಸಕ್ಕೆ ತಲುಪಿಸಿದರೆ ಸಮ ಸಮಾಜ ಸಾಧ್ಯ ಎಂದರು.</p>.<p>ಅಧ್ಯಕ್ಷತೆ ವಹಿಸಿ ಮಾತನಾಡಿದ ಐಐಪಿ ಪ್ರಕಾಶನದ ವ್ಯವಸ್ಥಾಪಕ ನಂಜೇಶ್ ಬೆಣ್ಣೂರು, ‘ತಮ್ಮ ಸಂಸ್ಥೆಯಿಂದ ಈವರೆಗೂ ಮೂರು ಸಾವಿರ ಪುಸ್ತಕ ಪ್ರಕಟಿಸಲಾಗಿದೆ. ಪುಸ್ತಕ ಸಂಸ್ಕೃತಿಯನ್ನು ನಿರಂತರವಾಗಿ ಹರಡುವ ಕೆಲಸ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ತರೀಕೆರೆಯ ಲೇಖಕ ಮನಸುಳಿ ಮೋಹನ್ ಅವರಿಗೆ ಕುಂಭಕ ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಗದೀಶ್ ಮರಾಬೈಲ್ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ, ಸಾಹಿತಿ ಡಿ.ಎಂ. ಮಂಜುನಾಥಸ್ವಾಮಿ, ಮಹೇಶ್ ಹಾದಿಹಳ್ಳಿ, ಹಿರೇಮಗಳೂರು ಪುಟ್ಟಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>