<p><strong>ನರಸಿಂಹರಾಜಪುರ</strong>: ರಾಷ್ಟ್ರಕವಿ ಕುವೆಂಪು ಅವರ ವಿಚಾರಧಾರೆ ಜಗತ್ತಿಗೆ ಬೆಳಕಾಗುವಂಥವು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ವಿನಯ್ ಕಣಿವೆ ಹೇಳಿದರು.</p>.<p>ಪಟ್ಟಣದ ಡಿಸಿಎಂಸಿ (ಶಾರದಾ ವಿದ್ಯಾಮಂದಿರ) ರಾಜ್ಯಪಠ್ಯ ಕ್ರಮದ ವಿಭಾಗದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ಡಿಸಿಎಂಸಿ ವಿದ್ಯಾಸಂಸ್ಥೆಯ ಕನ್ನಡಕೂಟಗಳ ಆಶ್ರಯದಲ್ಲಿ ಸೋಮವಾರ ನಡೆದ ವಿಶ್ವಮಾನವ ದಿನಾಚರಣೆ ಹಾಗೂ ಕುವೆಂಪು ಅವರ 122ನೇ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.</p>.<p>ಕುವೆಂಪು ಅವರು ಮಾನವೀಯ ಮೌಲ್ಯಗಳನ್ನು ಸಾರಿದ ಧೀಮಂತ ವ್ಯಕ್ತಿ. ಮಲೆನಾಡಿನ ಬಗ್ಗೆ ಸಾಮಾನ್ಯ ಜನರಿಗೆ ಮನಮುಟ್ಟುವಂತೆ ಬರೆದವರು. ನುಡಿದಂತೆ ನಡೆದ ಮಹಾನ್ ಮಾನವತಾವಾದಿ. ಗ್ರಾಮೀಣ ಬದುಕನ್ನು ಮೈಗೂಡಿಸಿಕೊಂಡಾಗ ಬದುಕು ಹಸನವಾಗುತ್ತದೆ. ಶ್ರೇಷ್ಠ ಜೀವನವಾಗುತ್ತದೆ ಎಂಬುದು ಅವರ ಚಿಂತನೆಯಾಗಿತ್ತು ಎಂದರು.</p>.<p>ತಾಲ್ಲೂಕು ಒಕ್ಕಲಿಗರ ಸಂಘದ ಜಂಟಿ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕುವೆಂಪು ಅವರು ಬರೆದಂತೆ ನಡೆದುಕೊಂಡವರು ಎಂದರು.</p>.<p>ರೋಟರಿ ಕ್ಲಬ್ ಕಾರ್ಯದರ್ಶಿ ಲೋಕೇಶ್ ಮಾತನಾಡಿದರು.</p>.<p>ಕಾರ್ಯಕ್ರಮಕ್ಕೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್.ಎಂ.ಸತೀಶ್ ಚಾಲನೆ ನೀಡಿದರು.</p>.<p>ರೋಟರಿ ನಿಯೋಜಿತ ಅಧ್ಯಕ್ಷ ಪಿ.ಎಸ್.ವಿದ್ಯಾನಂದಕುಮಾರ್ ಅಭಿನಂದನೆ ಸ್ವೀಕರಿಸಿದರು. ಪ್ರಾಂಶುಪಾಲೆ ಪದ್ಮಾರಮೇಶ್, ಮುಖ್ಯಶಿಕ್ಷಕಿ ಲವೀನಾ ಜೂಲಿಯಾನ ಡಿಕೋಸ್ಟ, ಶಿಕ್ಷಣ ಸಂಯೋಜಕಿ ತೃಪ್ತಿ ಅಮರ್, ಕಟ್ಟಿನಮನೆ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಮಂಜುನಾಥಗೌಡ, ಶಿಕ್ಷಕ ಥಾಮಸ್, ಕೃತಿಕಾ ಮತ್ತು ತಂಡ ಭಾಗವಹಿಸಿದ್ದರು.</p>.<p>ಕುವೆಂಪು ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ಶ್ರೀಜಿತ್ ಮತ್ತು ತಂಡ ಪ್ರಥಮ ಸ್ಥಾನ ₹5ಸಾವಿರ, ಅದಿತಿ ಮತ್ತು ತಂಡ ದ್ವಿತೀಯ ಸ್ಥಾನ ₹3ಸಾವಿರ, ತೃತೀಯ ಬಹುಮಾನ ಅಭಿರಾಮ್ ಮತ್ತು ತಂಡಕ್ಕೆ ₹2ಸಾವಿರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ</strong>: ರಾಷ್ಟ್ರಕವಿ ಕುವೆಂಪು ಅವರ ವಿಚಾರಧಾರೆ ಜಗತ್ತಿಗೆ ಬೆಳಕಾಗುವಂಥವು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ವಿನಯ್ ಕಣಿವೆ ಹೇಳಿದರು.</p>.<p>ಪಟ್ಟಣದ ಡಿಸಿಎಂಸಿ (ಶಾರದಾ ವಿದ್ಯಾಮಂದಿರ) ರಾಜ್ಯಪಠ್ಯ ಕ್ರಮದ ವಿಭಾಗದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ಡಿಸಿಎಂಸಿ ವಿದ್ಯಾಸಂಸ್ಥೆಯ ಕನ್ನಡಕೂಟಗಳ ಆಶ್ರಯದಲ್ಲಿ ಸೋಮವಾರ ನಡೆದ ವಿಶ್ವಮಾನವ ದಿನಾಚರಣೆ ಹಾಗೂ ಕುವೆಂಪು ಅವರ 122ನೇ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.</p>.<p>ಕುವೆಂಪು ಅವರು ಮಾನವೀಯ ಮೌಲ್ಯಗಳನ್ನು ಸಾರಿದ ಧೀಮಂತ ವ್ಯಕ್ತಿ. ಮಲೆನಾಡಿನ ಬಗ್ಗೆ ಸಾಮಾನ್ಯ ಜನರಿಗೆ ಮನಮುಟ್ಟುವಂತೆ ಬರೆದವರು. ನುಡಿದಂತೆ ನಡೆದ ಮಹಾನ್ ಮಾನವತಾವಾದಿ. ಗ್ರಾಮೀಣ ಬದುಕನ್ನು ಮೈಗೂಡಿಸಿಕೊಂಡಾಗ ಬದುಕು ಹಸನವಾಗುತ್ತದೆ. ಶ್ರೇಷ್ಠ ಜೀವನವಾಗುತ್ತದೆ ಎಂಬುದು ಅವರ ಚಿಂತನೆಯಾಗಿತ್ತು ಎಂದರು.</p>.<p>ತಾಲ್ಲೂಕು ಒಕ್ಕಲಿಗರ ಸಂಘದ ಜಂಟಿ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕುವೆಂಪು ಅವರು ಬರೆದಂತೆ ನಡೆದುಕೊಂಡವರು ಎಂದರು.</p>.<p>ರೋಟರಿ ಕ್ಲಬ್ ಕಾರ್ಯದರ್ಶಿ ಲೋಕೇಶ್ ಮಾತನಾಡಿದರು.</p>.<p>ಕಾರ್ಯಕ್ರಮಕ್ಕೆ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್.ಎಂ.ಸತೀಶ್ ಚಾಲನೆ ನೀಡಿದರು.</p>.<p>ರೋಟರಿ ನಿಯೋಜಿತ ಅಧ್ಯಕ್ಷ ಪಿ.ಎಸ್.ವಿದ್ಯಾನಂದಕುಮಾರ್ ಅಭಿನಂದನೆ ಸ್ವೀಕರಿಸಿದರು. ಪ್ರಾಂಶುಪಾಲೆ ಪದ್ಮಾರಮೇಶ್, ಮುಖ್ಯಶಿಕ್ಷಕಿ ಲವೀನಾ ಜೂಲಿಯಾನ ಡಿಕೋಸ್ಟ, ಶಿಕ್ಷಣ ಸಂಯೋಜಕಿ ತೃಪ್ತಿ ಅಮರ್, ಕಟ್ಟಿನಮನೆ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಮಂಜುನಾಥಗೌಡ, ಶಿಕ್ಷಕ ಥಾಮಸ್, ಕೃತಿಕಾ ಮತ್ತು ತಂಡ ಭಾಗವಹಿಸಿದ್ದರು.</p>.<p>ಕುವೆಂಪು ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ಶ್ರೀಜಿತ್ ಮತ್ತು ತಂಡ ಪ್ರಥಮ ಸ್ಥಾನ ₹5ಸಾವಿರ, ಅದಿತಿ ಮತ್ತು ತಂಡ ದ್ವಿತೀಯ ಸ್ಥಾನ ₹3ಸಾವಿರ, ತೃತೀಯ ಬಹುಮಾನ ಅಭಿರಾಮ್ ಮತ್ತು ತಂಡಕ್ಕೆ ₹2ಸಾವಿರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>