<p><strong>ನರಸಿಂಹರಾಜಪುರ:</strong> ‘ರಾಷ್ಟ್ರಕವಿ ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ಮಲೆನಾಡು ಭಾಗದ ಗ್ರಾಮೀಣ ಜನರ ಬದುಕಿನ ಚಿತ್ರಣವನ್ನು ಸುಂದರವಾಗಿ ಚಿತ್ರಿಸಿದ್ದಾರೆ. ಅವರು, ಸಾಹಿತ್ಯ ಲೋಕದ ಮಾಣಿಕ್ಯ’ ಎಂದು ಜ್ವಾಲಾಮಾಲಿನಿ ಜೆ.ಸಿ.ಐ ಸಂಸ್ಥೆಯ ನಿರ್ದೇಶಕ ಜಿ.ಪುರುಷೋತ್ತಮ್ ಹೇಳಿದರು.</p>.<p>ಪಟ್ಟಣದ ರೋಟರಿ ಕ್ಲಬ್ ಹಾಲ್ನಲ್ಲಿ ಗುರುವಾರ ನಡೆದ ಕುವೆಂಪು ಜನ್ಮದಿನಾಚರಣೆ ಪ್ರಯುಕ್ತ ಜೆ.ಸಿ.ಐ ಸಂಸ್ಥೆಯಿಂದ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆ ಹಾಗೂ ಹೊಸ ವರ್ಷ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.</p>.<p>ಕುವೆಂಪು ಅವರು ಕೊಪ್ಪ ತಾಲ್ಲೂಕಿನವರಾಗಿರುವುದು ನಮ್ಮೆಲ್ಲರ ಹೆಮ್ಮೆಯಾಗಿದೆ. ಅವರ ವೈಜ್ಞಾನಿಕ ಚಿಂತನೆಗಳು, ಸಾಹಿತ್ಯಗಳು ಯುವಪೀಳಿಗೆಗೆ ಅನುಕರಣೀಯವಾಗಿವೆ ಎಂದರು.</p>.<p>ಜೆ.ಸಿ.ಐ ಸಂಸ್ಥೆಯ ನಿರ್ದೇಶಕ ಪ್ರೀತಮ್ ಮಾತನಾಡಿ, ಕುವೆಂಪುರವರು ಬರೆದ ಕಥೆ, ಕಾದಂಬರಿಗಳನ್ನು ಯುವಜನರು ಓದಬೇಕು. ಅವರ ಪ್ರತಿಯೊಂದು ಕೃತಿಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತವೆ. ಕಾದಂಬರಿಗಳಲ್ಲಿ ಬರುವ ಪಾತ್ರಗಳು ಪ್ರತಿ ಕಾಲಘಟ್ಟಕ್ಕೂ ಅನ್ವಯಿಸುತ್ತದೆ. ಅವರ ಬರಹಗಳನ್ನು ಓದಿ ಆನಂದಿಸುವುದೇ ನಮ್ಮೆಲ್ಲರ ಭಾಗ್ಯವಾಗಿದೆ ಎಂದರು.</p>.<p>ಜ್ವಾಲಾಮಾಲಿನಿ ಜೆ.ಸಿ.ಐ ಸಂಸ್ಥೆ ಅಧ್ಯಕ್ಷ ಆದರ್ಶ ಬಿ.ಗೌಡ ಅಧ್ಯಕ್ಷತೆ ವಹಿಸಿದ್ದರು. ಹೊಸ ವರ್ಷಾಚರಣೆ ಅಂಗವಾಗಿ ಕೇಕ್ ಕತ್ತರಿಸಲಾಯಿತು.</p>.<p>ಜೆ.ಸಿ.ಐ ಪೂರ್ವ ವಲಯ ಉಪಾಧ್ಯಕ್ಷ ಚರಣ್ರಾಜ್, ಜೆ.ಸಿ.ಐ ಉಪಾಧ್ಯಕ್ಷರಾದ ಪ್ರಮಾಂಕ್, ದೇವಂತ್ರಾಜ್ಗೌಡ, ಸತ್ಯಪ್ರಸಾದ್, ಕಾರ್ಯದರ್ಶಿ ರಜಿತ್ ವಗ್ಗಡೆ, ಖಜಾಂಚಿ ಜೀವನ್, ನಿರ್ದೇಶಕರಾದ ಜೋಯಿ ಬ್ರೋ, ಪ್ರೀತಮ್, ನವೀನ್, ಮಿಥುನಗೌಡ, ನೂತನ ಸದಸ್ಯರುಗಳಾದ ಮನು, ಸುಹಾಸ್, ಪ್ರಥಮ್, ಶ್ರೀಹರಿ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ:</strong> ‘ರಾಷ್ಟ್ರಕವಿ ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ಮಲೆನಾಡು ಭಾಗದ ಗ್ರಾಮೀಣ ಜನರ ಬದುಕಿನ ಚಿತ್ರಣವನ್ನು ಸುಂದರವಾಗಿ ಚಿತ್ರಿಸಿದ್ದಾರೆ. ಅವರು, ಸಾಹಿತ್ಯ ಲೋಕದ ಮಾಣಿಕ್ಯ’ ಎಂದು ಜ್ವಾಲಾಮಾಲಿನಿ ಜೆ.ಸಿ.ಐ ಸಂಸ್ಥೆಯ ನಿರ್ದೇಶಕ ಜಿ.ಪುರುಷೋತ್ತಮ್ ಹೇಳಿದರು.</p>.<p>ಪಟ್ಟಣದ ರೋಟರಿ ಕ್ಲಬ್ ಹಾಲ್ನಲ್ಲಿ ಗುರುವಾರ ನಡೆದ ಕುವೆಂಪು ಜನ್ಮದಿನಾಚರಣೆ ಪ್ರಯುಕ್ತ ಜೆ.ಸಿ.ಐ ಸಂಸ್ಥೆಯಿಂದ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆ ಹಾಗೂ ಹೊಸ ವರ್ಷ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.</p>.<p>ಕುವೆಂಪು ಅವರು ಕೊಪ್ಪ ತಾಲ್ಲೂಕಿನವರಾಗಿರುವುದು ನಮ್ಮೆಲ್ಲರ ಹೆಮ್ಮೆಯಾಗಿದೆ. ಅವರ ವೈಜ್ಞಾನಿಕ ಚಿಂತನೆಗಳು, ಸಾಹಿತ್ಯಗಳು ಯುವಪೀಳಿಗೆಗೆ ಅನುಕರಣೀಯವಾಗಿವೆ ಎಂದರು.</p>.<p>ಜೆ.ಸಿ.ಐ ಸಂಸ್ಥೆಯ ನಿರ್ದೇಶಕ ಪ್ರೀತಮ್ ಮಾತನಾಡಿ, ಕುವೆಂಪುರವರು ಬರೆದ ಕಥೆ, ಕಾದಂಬರಿಗಳನ್ನು ಯುವಜನರು ಓದಬೇಕು. ಅವರ ಪ್ರತಿಯೊಂದು ಕೃತಿಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತವೆ. ಕಾದಂಬರಿಗಳಲ್ಲಿ ಬರುವ ಪಾತ್ರಗಳು ಪ್ರತಿ ಕಾಲಘಟ್ಟಕ್ಕೂ ಅನ್ವಯಿಸುತ್ತದೆ. ಅವರ ಬರಹಗಳನ್ನು ಓದಿ ಆನಂದಿಸುವುದೇ ನಮ್ಮೆಲ್ಲರ ಭಾಗ್ಯವಾಗಿದೆ ಎಂದರು.</p>.<p>ಜ್ವಾಲಾಮಾಲಿನಿ ಜೆ.ಸಿ.ಐ ಸಂಸ್ಥೆ ಅಧ್ಯಕ್ಷ ಆದರ್ಶ ಬಿ.ಗೌಡ ಅಧ್ಯಕ್ಷತೆ ವಹಿಸಿದ್ದರು. ಹೊಸ ವರ್ಷಾಚರಣೆ ಅಂಗವಾಗಿ ಕೇಕ್ ಕತ್ತರಿಸಲಾಯಿತು.</p>.<p>ಜೆ.ಸಿ.ಐ ಪೂರ್ವ ವಲಯ ಉಪಾಧ್ಯಕ್ಷ ಚರಣ್ರಾಜ್, ಜೆ.ಸಿ.ಐ ಉಪಾಧ್ಯಕ್ಷರಾದ ಪ್ರಮಾಂಕ್, ದೇವಂತ್ರಾಜ್ಗೌಡ, ಸತ್ಯಪ್ರಸಾದ್, ಕಾರ್ಯದರ್ಶಿ ರಜಿತ್ ವಗ್ಗಡೆ, ಖಜಾಂಚಿ ಜೀವನ್, ನಿರ್ದೇಶಕರಾದ ಜೋಯಿ ಬ್ರೋ, ಪ್ರೀತಮ್, ನವೀನ್, ಮಿಥುನಗೌಡ, ನೂತನ ಸದಸ್ಯರುಗಳಾದ ಮನು, ಸುಹಾಸ್, ಪ್ರಥಮ್, ಶ್ರೀಹರಿ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>