<p><strong>ಚಿಕ್ಕಮಗಳೂರು:</strong> ಭೂ ಒಡೆತನ ಯೋಜನೆಯಡಿ ಭೋವಿ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ನಿಗಮದಿಂದ ₹20 ಲಕ್ಷ ಸಹಾಯಧನ ನೀಡಲಾಗುವುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫಲಾನುಭವಿ ವಾಸಿಸುತ್ತಿರುವ ಸ್ಥಳದಿಂದ ಗರಿಷ್ಠ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಜಮೀನು ಖರೀದಿಸಿ ಭೋವಿ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರನ್ನು ಭೂ ಮಾಲೀಕರನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶ’ ಎಂದರು.</p>.<p>ಜಿಲ್ಲೆಯಲ್ಲಿ ಭೋವಿ ಸಮುದಾಯದ ಜನಸಂಖ್ಯೆ 33 ಸಾವಿರ ಇದೆ. ಭೂ ಒಡೆತನ ಯೋಜನೆಗೆ ಜಿಲ್ಲೆಯಲ್ಲಿ ಒಂದೇ ಒಂದು ಅರ್ಜಿ ಸಲ್ಲಿಕೆಯಾಗಿದೆ. ಎಲ್ಲಾ 8 ಯೋಜನೆಗಳ ಬಗ್ಗೆ ಸಮುದಾಯದ ಜನರಿಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.</p>.<p>ಕುರಿ, ಮೇಕೆ ಸಾಕಾಣಿಕೆ ಯೋಜನೆಯಡಿ 10 ಕುರಿ 1 ಟಗರು ಖರೀದಿಸಲು ₹1 ಲಕ್ಷ ಸಹಾಯಧನ ಪಡೆಯುವ ಅವಕಾಶವಿದೆ. ಸಮುದಾಯದ ಜನ ಇದರ ಉಪಯೋಗ ಪಡೆದುಕೊಳ್ಳಬೇಕು. ಹೈನುಗಾರಿಕೆ ಮಾಡುವವರಿಗೆ 2 ಹಸು ನೀಡಲಾಗುವುದು ಎಂದು ವಿವರಿಸಿದರು.</p>.<p>ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಯಂ ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ ₹4 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಆಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲು ₹3.75 ಲಕ್ಷ ನೀಡಲಾಗುವುದು ಎಂದು ತಿಳಿಸಿದರು.</p>.<p>ಕಿರುಸಾಲ ಯೋಜನೆಯಡಿ 10 ಜನ ಮಹಿಳಾ ಸದಸ್ಯರು ಸಂಘ ನೋಂದಾಯಿಸಿಕೊಂಡಿದ್ದರೆ ಅಂತಹ ಮಹಿಳಾ ಸಂಘದ ಸದಸ್ಯರಿಗೆ ₹5 ಲಕ್ಷ ಸಹಾಯಧನ ಸಹಿತ ಸಾಲ ನೀಡಲಾಗುವುದು. ಈ ಆರ್ಥಿಕ ನೆರವನ್ನು ಆವರು ಬಳಸಿಕೊಂಡು ಸ್ವಂತ ಉದ್ಯೋಗ ಮಾಡಬಹುದು ಎಂದರು.</p>.<p>ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ, ನಿಗಮದ ಅಧಿಕಾರಿ ಮನೀಶ್ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಭೂ ಒಡೆತನ ಯೋಜನೆಯಡಿ ಭೋವಿ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ನಿಗಮದಿಂದ ₹20 ಲಕ್ಷ ಸಹಾಯಧನ ನೀಡಲಾಗುವುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಫಲಾನುಭವಿ ವಾಸಿಸುತ್ತಿರುವ ಸ್ಥಳದಿಂದ ಗರಿಷ್ಠ 10 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಜಮೀನು ಖರೀದಿಸಿ ಭೋವಿ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರನ್ನು ಭೂ ಮಾಲೀಕರನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶ’ ಎಂದರು.</p>.<p>ಜಿಲ್ಲೆಯಲ್ಲಿ ಭೋವಿ ಸಮುದಾಯದ ಜನಸಂಖ್ಯೆ 33 ಸಾವಿರ ಇದೆ. ಭೂ ಒಡೆತನ ಯೋಜನೆಗೆ ಜಿಲ್ಲೆಯಲ್ಲಿ ಒಂದೇ ಒಂದು ಅರ್ಜಿ ಸಲ್ಲಿಕೆಯಾಗಿದೆ. ಎಲ್ಲಾ 8 ಯೋಜನೆಗಳ ಬಗ್ಗೆ ಸಮುದಾಯದ ಜನರಿಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.</p>.<p>ಕುರಿ, ಮೇಕೆ ಸಾಕಾಣಿಕೆ ಯೋಜನೆಯಡಿ 10 ಕುರಿ 1 ಟಗರು ಖರೀದಿಸಲು ₹1 ಲಕ್ಷ ಸಹಾಯಧನ ಪಡೆಯುವ ಅವಕಾಶವಿದೆ. ಸಮುದಾಯದ ಜನ ಇದರ ಉಪಯೋಗ ಪಡೆದುಕೊಳ್ಳಬೇಕು. ಹೈನುಗಾರಿಕೆ ಮಾಡುವವರಿಗೆ 2 ಹಸು ನೀಡಲಾಗುವುದು ಎಂದು ವಿವರಿಸಿದರು.</p>.<p>ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಯಂ ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ ₹4 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಆಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲು ₹3.75 ಲಕ್ಷ ನೀಡಲಾಗುವುದು ಎಂದು ತಿಳಿಸಿದರು.</p>.<p>ಕಿರುಸಾಲ ಯೋಜನೆಯಡಿ 10 ಜನ ಮಹಿಳಾ ಸದಸ್ಯರು ಸಂಘ ನೋಂದಾಯಿಸಿಕೊಂಡಿದ್ದರೆ ಅಂತಹ ಮಹಿಳಾ ಸಂಘದ ಸದಸ್ಯರಿಗೆ ₹5 ಲಕ್ಷ ಸಹಾಯಧನ ಸಹಿತ ಸಾಲ ನೀಡಲಾಗುವುದು. ಈ ಆರ್ಥಿಕ ನೆರವನ್ನು ಆವರು ಬಳಸಿಕೊಂಡು ಸ್ವಂತ ಉದ್ಯೋಗ ಮಾಡಬಹುದು ಎಂದರು.</p>.<p>ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ, ನಿಗಮದ ಅಧಿಕಾರಿ ಮನೀಶ್ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>