ಕೆಲವು ದಿನಗಳಿಂದ ಈ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಗುಡ್ಡದ ಮಣ್ಣು ಕುಸಿತವಾಗಿ ರಸ್ತೆಗೆ ಬಂದು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಇದರಿಂದ ಕೆಲವು ಹೊತ್ತು ಘಾಟ್ ಪ್ರದೇಶದಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಈ ಗುಡ್ಡ ಕುಸಿತದ ಬಲಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಇಲ್ಲಿ ತೀವ್ರ ಕಿರಿದಾಗಿದೆ. ಇದರಿಂದ ಕಿರಿದಾದ ರಸ್ತೆಯಲ್ಲಿ ಒಂದೊಂದಾಗಿ ವಾಹನ ಸಂಚರಿಸಬೇಕಾ ಗಿದ್ದರಿಂದ ಸೋಮವಾರ ಗಂಟೆಗೂ ಅಧಿಕ ಕಾಲ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು.