<p><strong>ಚಿಕ್ಕಮಗಳೂರು</strong>: ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್ ಅವರು ವಕೀಲರೊಬ್ಬರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲರು ನ್ಯಾಯಾಲಯದ ಕಲಾಪದಿಂದ ಗುರುವಾರ ಹೊರಗುಳಿದು ಪ್ರತಿಭಟನೆ ನಡೆಸಿದರು.</p>.<p>ತರೀಕೆರೆ, ಚಿಕ್ಕಮಗಳೂರು, ಕಡೂರು, ಮೂಡಿಗೆರೆಯಲ್ಲಿ ವಕೀಲರು ನ್ಯಾಯಾಲಯದ ಕಲಾಪದಿಂದ ದೂರ ಉಳಿದರು. ಜಿಲ್ಲಾ ವಕೀಲರ ಸಂಘ ಮತ್ತು ತರೀಕೆರೆ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.</p>.<p>ಭೂ ವಿವಾದವೊಂದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಉಪವಿಭಾಗಾಧಿಕಾರಿಗೆ ತಲುಪಿಸಲು ಕಡೂರಿನ ವಕೀಲ ಹರೀಶ್ ಬುಧವಾರ ಸಂಜೆ ತೆರಳಿದ್ದರು. ಇದಕ್ಕೂ ಮುನ್ನ ಉಪವಿಭಾಗಾಧಿಕಾರಿ ಮಾಡಿದ್ದ ಆದೇಶ ಕಾನೂನಿಗೆ ವಿರುದ್ಧವಾಗಿದೆ ಎಂದು ಹರೀಶ್ ಅವರ ಕಕ್ಷಿದಾರರು ಮುಖ್ಯಮಂತ್ರಿಗೆ ದೂರು ನೀಡಿದ್ದರು. ಈ ವಿಷಯ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.</p>.<p>‘ಹೈಕೋರ್ಟ್ ಆದೇಶದ ಪ್ರತಿಯನ್ನು ಮುಖದ ಮೇಲೆ ಎಸೆದು ಅವಾಚ್ಯವಾಗಿ ನಿಂದಿಸಿದರು. ಮೊಬೈಲ್ ಪೋನ್ ಕಸಿದುಕೊಂಡರು. ಬೇರೆ ವ್ಯಕ್ತಿಗಳನ್ನು ಕಚೇರಿಗೆ ಕರೆಸಿಕೊಂಡು ಬೆದರಿಸಿದರು. ಪೊಲೀಸರನ್ನೂ ಕರೆಸಿ ದೌರ್ಜನ್ಯ ನಡೆಸಲು ಯತ್ನಿಸಿದರು’ ಎಂದು ವಕೀಲ ಹರೀಶ್ ಜಿಲ್ಲಾಧಿಕಾರಿಗೆ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜ್ ಅವರು ವಕೀಲರೊಬ್ಬರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲರು ನ್ಯಾಯಾಲಯದ ಕಲಾಪದಿಂದ ಗುರುವಾರ ಹೊರಗುಳಿದು ಪ್ರತಿಭಟನೆ ನಡೆಸಿದರು.</p>.<p>ತರೀಕೆರೆ, ಚಿಕ್ಕಮಗಳೂರು, ಕಡೂರು, ಮೂಡಿಗೆರೆಯಲ್ಲಿ ವಕೀಲರು ನ್ಯಾಯಾಲಯದ ಕಲಾಪದಿಂದ ದೂರ ಉಳಿದರು. ಜಿಲ್ಲಾ ವಕೀಲರ ಸಂಘ ಮತ್ತು ತರೀಕೆರೆ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.</p>.<p>ಭೂ ವಿವಾದವೊಂದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಉಪವಿಭಾಗಾಧಿಕಾರಿಗೆ ತಲುಪಿಸಲು ಕಡೂರಿನ ವಕೀಲ ಹರೀಶ್ ಬುಧವಾರ ಸಂಜೆ ತೆರಳಿದ್ದರು. ಇದಕ್ಕೂ ಮುನ್ನ ಉಪವಿಭಾಗಾಧಿಕಾರಿ ಮಾಡಿದ್ದ ಆದೇಶ ಕಾನೂನಿಗೆ ವಿರುದ್ಧವಾಗಿದೆ ಎಂದು ಹರೀಶ್ ಅವರ ಕಕ್ಷಿದಾರರು ಮುಖ್ಯಮಂತ್ರಿಗೆ ದೂರು ನೀಡಿದ್ದರು. ಈ ವಿಷಯ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.</p>.<p>‘ಹೈಕೋರ್ಟ್ ಆದೇಶದ ಪ್ರತಿಯನ್ನು ಮುಖದ ಮೇಲೆ ಎಸೆದು ಅವಾಚ್ಯವಾಗಿ ನಿಂದಿಸಿದರು. ಮೊಬೈಲ್ ಪೋನ್ ಕಸಿದುಕೊಂಡರು. ಬೇರೆ ವ್ಯಕ್ತಿಗಳನ್ನು ಕಚೇರಿಗೆ ಕರೆಸಿಕೊಂಡು ಬೆದರಿಸಿದರು. ಪೊಲೀಸರನ್ನೂ ಕರೆಸಿ ದೌರ್ಜನ್ಯ ನಡೆಸಲು ಯತ್ನಿಸಿದರು’ ಎಂದು ವಕೀಲ ಹರೀಶ್ ಜಿಲ್ಲಾಧಿಕಾರಿಗೆ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>