ಎ.ವಿ.ಗಾಯತ್ರಿ ಶಾಂತೇಗೌಡ ಅವರು ಜಿಲ್ಲಾಧಿಕಾರಿ ಕಚೇರಿಯಿಂದ ಹೊರ ಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯಿಂದ ಆಯ್ಕೆಯಾದ ವಿಧಾನ ಪರಿಷತ್ ಬಿಜೆಪಿ ಸದಸ್ಯರು ಗ್ರಾಮ ಪಂಚಾಯಿತಿಗಳಿಗೆ ಜನರೇಟರ್ ನೀಡಿದ್ದು ಬಿಟ್ಟರೆ, ಬೇರೆನೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಜನರೇಟರ್ನಿಂದ ಶಬ್ದ ಮಾಲಿನ್ಯ ಹೆಚ್ಚು. ಅದಕ್ಕೆ ಪೆಟ್ರೋಲ್, ಡೀಸೆಲ್ ತುಂಬಿಸಲು ಹಣ ವ್ಯಯಿಸಬೇಕು. ಅದರ ಬದಲು ಯುಪಿಎಸ್ ನೀಡಬಹುದಾಗಿತ್ತು’ ಎಂದು ಟೀಕಿಸಿದರು.