ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ದಾಳಿ: ಜಾನುವಾರು ಸಾವು

Last Updated 2 ಫೆಬ್ರುವರಿ 2023, 4:37 IST
ಅಕ್ಷರ ಗಾತ್ರ

ಮೂಡಿಗೆರೆ: ತಾಲ್ಲೂಕಿನ ಹಾಲೂರು ಚಕ್ರಮಣಿ ಗ್ರಾಮದ ಸಮೀಪ ಚಿರತೆಯೊಂದು ಜಾನುವಾರನ್ನು ಕೊಂದಿದ್ದು, ಸುತ್ತಮುತ್ತಲಿನ ಗ್ರಾಮದಲ್ಲಿ ಭಯದ ವಾತಾವರಣ ಉಂಟಾಗಿದೆ.

ಚಕ್ರಮಣಿ ಗ್ರಾಮದ ಗೋಪಾಲ ಎಂಬುವರು ಕಳೆದ ಎರಡು ದಿನದಿಂದ ಜಾನುವಾರು ವಾಪಸ್ ಮನೆಗೆ ಬಾರದಿದ್ದ ಹಿನ್ನಲೆಯಲ್ಲಿ ಮಂಗಳವಾರ ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಡಿದ್ದಾರೆ. ಈ ಸಂದರ್ಭದಲ್ಲಿ ಚಕ್ರಮಣಿ ಸಮೀಪದ ತೋಟವೊಂದರಲ್ಲಿ ಜಾನುವಾರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿರತೆಯ ಬಾಯಿಗೆ ಸಿಲುಕಿದೆ ಎಂಬುದು ತಿಳಿದುಬಂದಿದೆ.

ಘಟನೆ ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT