ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡೂರು | ಚಿರತೆ ದಾಳಿ: ಮೇಕೆ, ಕುರಿ ಮರಿಗಳ ಸಾವು

Published 15 ಡಿಸೆಂಬರ್ 2023, 14:22 IST
Last Updated 15 ಡಿಸೆಂಬರ್ 2023, 14:22 IST
ಅಕ್ಷರ ಗಾತ್ರ

ಕಡೂರು: ಪಟ್ಟಣದ ಹೊರವಲಯದ ಮಲ್ಲೇಶ್ವರದ ಬೈಪಾಸ್ ರಸ್ತೆ ಬದಿಯಲ್ಲಿರುವ ತೋಟದಲ್ಲಿ ಬೀಡುಬಿಟ್ಟಿದ್ದ ಕುರಿಮಂದೆ ಮೇಲೆ ಚಿರತೆ ದಾಳಿ ನಡೆಸಿದ್ದು, 14 ಮೇಕೆ ಮತ್ತು 17 ಕುರಿ ಮರಿಗಳು ಸಾವನ್ನಪ್ಪಿವೆ.

ಕಡೂರು ಪಟ್ಟಣದ ನಿವಾಸಿಗಳಾದ ಚಂದ್ರಶೇಖರ್, ಬಸವರಾಜ್, ಮಂಜು ಹಾಗೂ ಲಕ್ಷ್ಮಣ ಎಂಬುವವರ ಈ ಕುರಿಗಳನ್ನು ಸುಶೀಲಮ್ಮ ಎಂಬುವವರ ತೋಟದಲ್ಲಿ ಬಿಡಲಾಗಿತ್ತು. ಪಶುವೈದ್ಯ ಇಲಾಖೆಯ ಡಾ.ಉಮೇಶ್ ಮತ್ತು ಸಿಬ್ಬಂದಿ ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿದರು. ₹3 ಲಕ್ಷ ನಷ್ಟ ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಭೇಟಿ ನೀಡಿದರು.

ವಲಯ ಅರಣ್ಯಾಧಿಕಾರಿ ಲೋಕೇಶ್, ಉಪವಲಯ ಅರಣ್ಯಾಧಿಕಾರಿ ಹರೀಶ್ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT