ಕಡೂರು ಪಟ್ಟಣದ ನಿವಾಸಿಗಳಾದ ಚಂದ್ರಶೇಖರ್, ಬಸವರಾಜ್, ಮಂಜು ಹಾಗೂ ಲಕ್ಷ್ಮಣ ಎಂಬುವವರ ಈ ಕುರಿಗಳನ್ನು ಸುಶೀಲಮ್ಮ ಎಂಬುವವರ ತೋಟದಲ್ಲಿ ಬಿಡಲಾಗಿತ್ತು. ಪಶುವೈದ್ಯ ಇಲಾಖೆಯ ಡಾ.ಉಮೇಶ್ ಮತ್ತು ಸಿಬ್ಬಂದಿ ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿದರು. ₹3 ಲಕ್ಷ ನಷ್ಟ ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಭೇಟಿ ನೀಡಿದರು.