<p><strong>ಕಡೂರು (ಚಿಕ್ಕಮಗಳೂರು):</strong> ತಾಲ್ಲೂಕಿನ ಎಮ್ಮೆದೊಡ್ಡಿ ಬಳಿ ಗುರುವಾರ ಬೈಕ್ ಸವಾರರ ಮೇಲೆ ಚಿರತೆ ದಾಳಿ ಮಾಡಿದ್ದು, ಸುದ್ದಿ ತಿಳಿದು ಗ್ರಾಮಸ್ಥರು ಚಿರತೆ ಅಟ್ಟಾಡಿಸಿ ಕಲ್ಲುಗಳನ್ನು ಎಸೆದಿದ್ದಾರೆ.</p>.<p>ಈ ಘಟನೆಯ ಕೆಲ ಹೊತ್ತಿನಲ್ಲೇ ಸಮೀಪದ ಮದಗದ ಕೆರೆಯಲ್ಲಿ ಚಿರತೆಯೊಂದರ ಕಳೇಬರವು ಪತ್ತೆಯಾಗಿದೆ.</p>.<p>‘ಕಳೇಬರದಲ್ಲಿ ಗಾಯದ ಗುರುತುಗಳಿವೆ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಇದು, ಅದೇ ಚಿರತೆಯೊ, ಬೇರೆಯದೊ ಎಂದು ತಿಳಿಯಲಿದೆ’ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್ಬಾಬು ತಿಳಿಸಿದ್ದಾರೆ.</p>.<p>ಬೆಳಿಗ್ಗೆ ಸಖರಾಯಪಟ್ಟಣಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ಹೊಸ ಸಿದ್ಧರಹಳ್ಳಿಯ ಮಂಜಪ್ಪ(56), ಹಳೇ ಸಿದ್ಧರಹಳ್ಳಿಯ ಮೂರ್ತಪ್ಪ (55) ಚಿರತೆ ದಾಳಿಯಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಚಿರತೆ ದಾಳಿ ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ನೂರಾರು ಜನರು ಚಿರತೆಯನ್ನು ಅಟ್ಟಾಡಿಸಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಸೆರೆಗೆ ಬೋನು ಇರಿಸಿದರು.ಇದೇ ವೇಳೆ ಚಿರತೆ ಮೃತದೇಹ ಕಂಡುಬಂತು.</p>.<p>‘ಬೈಕ್ ಸವಾರರ ಮೇಲೆ ದಾಳಿ ಮಾಡಿರುವ ಚಿರತೆಯೇ ಬೇರೆ, ಇಲ್ಲಿ ಸತ್ತಿರುವ ಚಿರತೆಯೇ ಬೇರೆ. ದಾಳಿ ಮಾಡಿರುವ ಚಿರತೆ ಸೆರೆ ಹಿಡಿದು ಸ್ಥಳಾಂತರ ಮಾಡಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p>‘ಚಿರತೆ ಕಳೇಬರದ ಮರಣೋತ್ತರ ಪರೀಕ್ಷೆ ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ಬಾಬು ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು (ಚಿಕ್ಕಮಗಳೂರು):</strong> ತಾಲ್ಲೂಕಿನ ಎಮ್ಮೆದೊಡ್ಡಿ ಬಳಿ ಗುರುವಾರ ಬೈಕ್ ಸವಾರರ ಮೇಲೆ ಚಿರತೆ ದಾಳಿ ಮಾಡಿದ್ದು, ಸುದ್ದಿ ತಿಳಿದು ಗ್ರಾಮಸ್ಥರು ಚಿರತೆ ಅಟ್ಟಾಡಿಸಿ ಕಲ್ಲುಗಳನ್ನು ಎಸೆದಿದ್ದಾರೆ.</p>.<p>ಈ ಘಟನೆಯ ಕೆಲ ಹೊತ್ತಿನಲ್ಲೇ ಸಮೀಪದ ಮದಗದ ಕೆರೆಯಲ್ಲಿ ಚಿರತೆಯೊಂದರ ಕಳೇಬರವು ಪತ್ತೆಯಾಗಿದೆ.</p>.<p>‘ಕಳೇಬರದಲ್ಲಿ ಗಾಯದ ಗುರುತುಗಳಿವೆ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಇದು, ಅದೇ ಚಿರತೆಯೊ, ಬೇರೆಯದೊ ಎಂದು ತಿಳಿಯಲಿದೆ’ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್ಬಾಬು ತಿಳಿಸಿದ್ದಾರೆ.</p>.<p>ಬೆಳಿಗ್ಗೆ ಸಖರಾಯಪಟ್ಟಣಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ಹೊಸ ಸಿದ್ಧರಹಳ್ಳಿಯ ಮಂಜಪ್ಪ(56), ಹಳೇ ಸಿದ್ಧರಹಳ್ಳಿಯ ಮೂರ್ತಪ್ಪ (55) ಚಿರತೆ ದಾಳಿಯಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಚಿರತೆ ದಾಳಿ ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ನೂರಾರು ಜನರು ಚಿರತೆಯನ್ನು ಅಟ್ಟಾಡಿಸಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಸೆರೆಗೆ ಬೋನು ಇರಿಸಿದರು.ಇದೇ ವೇಳೆ ಚಿರತೆ ಮೃತದೇಹ ಕಂಡುಬಂತು.</p>.<p>‘ಬೈಕ್ ಸವಾರರ ಮೇಲೆ ದಾಳಿ ಮಾಡಿರುವ ಚಿರತೆಯೇ ಬೇರೆ, ಇಲ್ಲಿ ಸತ್ತಿರುವ ಚಿರತೆಯೇ ಬೇರೆ. ದಾಳಿ ಮಾಡಿರುವ ಚಿರತೆ ಸೆರೆ ಹಿಡಿದು ಸ್ಥಳಾಂತರ ಮಾಡಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p>‘ಚಿರತೆ ಕಳೇಬರದ ಮರಣೋತ್ತರ ಪರೀಕ್ಷೆ ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ಬಾಬು ಅವರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>