<p><strong>ಚಿಕ್ಕಮಗಳೂರು:</strong> ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಬಳಿ ಜುಲೈ 31ರಂದು ನಡೆದಿದ್ದ ಚಿರತೆ ಸಾವಿನ ಕುರಿತ ತನಿಖೆಗೆ ಶಿವಮೊಗ್ಗ ಸಿಸಿಎಫ್ ನೇತೃತ್ವದಲ್ಲಿ ಇಲಾಖೆ ತಂಡ ರಚಿಸಿದೆ.</p>.<p>‘ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ವಲಯದ ದೇವಿಹಳ್ಳಿಯಲ್ಲಿ ಜುಲೈ 30ರಂದು ಸೆರೆ ಹಿಡಿದ ಚಿರತೆಯನ್ನು ಅದೇ ರಾತ್ರಿ ಎಮ್ಮೆದೊಡ್ಡಿ ಬಳಿ ಬಿಡಲಾಗಿದೆ. ಈ ವೇಳೆ ಅರಣ್ಯ ಇಲಾಖೆ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಪಾಲಿಸಿಲ್ಲ’ ಎಂಬ ಅನುಮಾನ ವ್ಯಕ್ತವಾಗಿತ್ತು.</p>.<p>ಎಮ್ಮದೊಡ್ಡಿ ಬಳಿ ಜನರ ಮೇಲೆ ದಾಳಿ ಮಾಡಿದ್ದ ಚಿರತೆ ಸತ್ತಿದೆಯೇ, ಜನ ಕಲ್ಲು ತೂರಿದ ಚಿರತೆಯೇ ಎಂಬ ಬಗ್ಗೆ ತನಿಖೆ ನಡೆಸಿ ಏಳು ದಿನಗಳಲ್ಲಿ ವರದಿ ಸಲ್ಲಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಬಳಿ ಜುಲೈ 31ರಂದು ನಡೆದಿದ್ದ ಚಿರತೆ ಸಾವಿನ ಕುರಿತ ತನಿಖೆಗೆ ಶಿವಮೊಗ್ಗ ಸಿಸಿಎಫ್ ನೇತೃತ್ವದಲ್ಲಿ ಇಲಾಖೆ ತಂಡ ರಚಿಸಿದೆ.</p>.<p>‘ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ವಲಯದ ದೇವಿಹಳ್ಳಿಯಲ್ಲಿ ಜುಲೈ 30ರಂದು ಸೆರೆ ಹಿಡಿದ ಚಿರತೆಯನ್ನು ಅದೇ ರಾತ್ರಿ ಎಮ್ಮೆದೊಡ್ಡಿ ಬಳಿ ಬಿಡಲಾಗಿದೆ. ಈ ವೇಳೆ ಅರಣ್ಯ ಇಲಾಖೆ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಪಾಲಿಸಿಲ್ಲ’ ಎಂಬ ಅನುಮಾನ ವ್ಯಕ್ತವಾಗಿತ್ತು.</p>.<p>ಎಮ್ಮದೊಡ್ಡಿ ಬಳಿ ಜನರ ಮೇಲೆ ದಾಳಿ ಮಾಡಿದ್ದ ಚಿರತೆ ಸತ್ತಿದೆಯೇ, ಜನ ಕಲ್ಲು ತೂರಿದ ಚಿರತೆಯೇ ಎಂಬ ಬಗ್ಗೆ ತನಿಖೆ ನಡೆಸಿ ಏಳು ದಿನಗಳಲ್ಲಿ ವರದಿ ಸಲ್ಲಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>