<p><strong>ಚಿಕ್ಕಮಗಳೂರು</strong>: ವಿದ್ಯಾರ್ಥಿ ದಿಸೆಯಿಂದಲೇ ಮಕ್ಕಳು ಪುಸ್ತಕ ಸ್ನೇಹಿಗಳಾಗಬೇಕು. ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಗ್ರಂಥಾಲಯಗಳಲ್ಲಿ ದೊರೆಯುವ ಪುಸ್ತಕಗಳು ಬದುಕಿಗೆ ಹೊಸ ಮಾರ್ಗ ನೀಡಲಿದೆ ಎಂದು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಹೇಳಿದರು.</p>.<p>ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಹೊಸಮನೆ ಬಡಾವಣೆ ಸಮೀಪದ ಗ್ರಂಥಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಸಾರ್ವಜನಿಕರ ಓದಿಗೆ ಗುಣಮಟ್ಟದ ಗ್ರಂಥಾಲಯ ಕಟ್ಟಡ ಸೇರಿ ಸ್ವಚ್ಛಂದ ವಾತಾವರಣ ನಿರ್ಮಾಣ ಮಾಡಲಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ದೇಶದ ಖ್ಯಾತ ವ್ಯಕ್ತಿಗಳ ಜೀವನ ಚರಿತ್ರೆ ಹಾಗೂ ಉನ್ನತ ವಿದ್ಯಾಭ್ಯಾಸಕ್ಕಾಗಿ ಎಲ್ಲಾ ರೀತಿಯ ಪುಸ್ತಕಗಳನ್ನು ಅಡಕಗೊಳಿಸಲಾಗಿದೆ ಎಂದರು.</p>.<p>ಮುಂದಿನ ದಿನಗಳಲ್ಲಿ ಗ್ರಂಥಾಲಯಕ್ಕೆ ಅವಶ್ಯಕತೆ ಇರುವ ಮೂಲ ಸೌಕರ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸಲಾಗುವುದು. ದೇಶದ ಮುಂದಿನ ಯುವ ಪ್ರಜೆಗಳನ್ನು ಸಮಾಜದ ಮುಂಚೂಣಿಗೆ ಒಯ್ಯುವುದೇ ಪ್ರಮುಖ ಧ್ಯೇಯ ಎಂದು ಹೇಳಿದರು.</p>.<p>ಸಾಹಿತಿ ಬಿ.ತಿಪ್ಪೇರುದ್ರಪ್ಪ ಮಾತನಾಡಿ, ‘ಗ್ರಂಥಾಲಯಗಳು ಜ್ಞಾನ ಉಣಬಡಿಸುವ ಕೇಂದ್ರಗಳು. ಕನಿಷ್ಠ ದಿನದ ಒಂದು ಗಂಟೆಗಳ ಕಾಲ ಬಿಡುವು ಮಾಡಿಕೊಂಡು ಗ್ರಂಥಾಲಯಕ್ಕೆ ತೆರಳಿ ದಿನ ಪತ್ರಿಕೆ, ಪುಸ್ತಕಗಳು ಓದುವ ಅಭ್ಯಾಸಿವಿರಬೇಕು. ಇದು ಸಮಾಜದ ಆಗು-ಹೋಗುಗಳನ್ನು ಸಮಗ್ರವಾಗಿ ತಿಳಿದುಕೊಳ್ಳಲು ಸಾಧ್ಯ’ ಎಂದು ತಿಳಿಸಿದರು.</p>.<p>ನಗರ ಕೇಂದ್ರ ಗ್ರಂಥಾಲಯಾಧಿಕಾರಿ ಜಿ.ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ಇಂದಿನಿಂದ ನ. 20ರವರೆಗೆ ಸಪ್ತಾಹ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ, ಚಿತ್ರಕಲೆ ಸ್ಪರ್ಧೆ ಹಾಗೂ ಗ್ರಂಥಾಲಯ ಮಹತ್ವ ಕುರಿತು ಉಪನ್ಯಾಸ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುವುದು’ ಎಂದು ಹೇಳಿದರು.</p>.<p>ನಗರಸಭೆ ಉಪಾಧ್ಯಕ್ಷೆ ಲಲಿತಾ ನಾಯ್ಕ, ಸದಸ್ಯೆ ಸುಜಾತಾ ಶಿವಕುಮಾರ್, ಸ್ಪರ್ಧಾತ್ಮಕ ತರಬೇತಿ ಸಂಸ್ಥೆ ಮುಖ್ಯಸ್ಥ ತುಳಸಿದಾಸ್, ಗ್ರಂಥಾಲಯ ಸಿಬ್ಬಂದಿ ರಾಘವೇಂದ್ರ, ರೂಪಾ, ಶಂಕರೇಗೌಡ, ಸಿದ್ದೇಗೌಡ, ಸೌಮ್ಯಾ, ಕೃಪಾ, ಕೆ.ಬಿ.ವೀಣಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ವಿದ್ಯಾರ್ಥಿ ದಿಸೆಯಿಂದಲೇ ಮಕ್ಕಳು ಪುಸ್ತಕ ಸ್ನೇಹಿಗಳಾಗಬೇಕು. ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಗ್ರಂಥಾಲಯಗಳಲ್ಲಿ ದೊರೆಯುವ ಪುಸ್ತಕಗಳು ಬದುಕಿಗೆ ಹೊಸ ಮಾರ್ಗ ನೀಡಲಿದೆ ಎಂದು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಹೇಳಿದರು.</p>.<p>ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಹೊಸಮನೆ ಬಡಾವಣೆ ಸಮೀಪದ ಗ್ರಂಥಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಸಾರ್ವಜನಿಕರ ಓದಿಗೆ ಗುಣಮಟ್ಟದ ಗ್ರಂಥಾಲಯ ಕಟ್ಟಡ ಸೇರಿ ಸ್ವಚ್ಛಂದ ವಾತಾವರಣ ನಿರ್ಮಾಣ ಮಾಡಲಾಗಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ದೇಶದ ಖ್ಯಾತ ವ್ಯಕ್ತಿಗಳ ಜೀವನ ಚರಿತ್ರೆ ಹಾಗೂ ಉನ್ನತ ವಿದ್ಯಾಭ್ಯಾಸಕ್ಕಾಗಿ ಎಲ್ಲಾ ರೀತಿಯ ಪುಸ್ತಕಗಳನ್ನು ಅಡಕಗೊಳಿಸಲಾಗಿದೆ ಎಂದರು.</p>.<p>ಮುಂದಿನ ದಿನಗಳಲ್ಲಿ ಗ್ರಂಥಾಲಯಕ್ಕೆ ಅವಶ್ಯಕತೆ ಇರುವ ಮೂಲ ಸೌಕರ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸಲಾಗುವುದು. ದೇಶದ ಮುಂದಿನ ಯುವ ಪ್ರಜೆಗಳನ್ನು ಸಮಾಜದ ಮುಂಚೂಣಿಗೆ ಒಯ್ಯುವುದೇ ಪ್ರಮುಖ ಧ್ಯೇಯ ಎಂದು ಹೇಳಿದರು.</p>.<p>ಸಾಹಿತಿ ಬಿ.ತಿಪ್ಪೇರುದ್ರಪ್ಪ ಮಾತನಾಡಿ, ‘ಗ್ರಂಥಾಲಯಗಳು ಜ್ಞಾನ ಉಣಬಡಿಸುವ ಕೇಂದ್ರಗಳು. ಕನಿಷ್ಠ ದಿನದ ಒಂದು ಗಂಟೆಗಳ ಕಾಲ ಬಿಡುವು ಮಾಡಿಕೊಂಡು ಗ್ರಂಥಾಲಯಕ್ಕೆ ತೆರಳಿ ದಿನ ಪತ್ರಿಕೆ, ಪುಸ್ತಕಗಳು ಓದುವ ಅಭ್ಯಾಸಿವಿರಬೇಕು. ಇದು ಸಮಾಜದ ಆಗು-ಹೋಗುಗಳನ್ನು ಸಮಗ್ರವಾಗಿ ತಿಳಿದುಕೊಳ್ಳಲು ಸಾಧ್ಯ’ ಎಂದು ತಿಳಿಸಿದರು.</p>.<p>ನಗರ ಕೇಂದ್ರ ಗ್ರಂಥಾಲಯಾಧಿಕಾರಿ ಜಿ.ಉಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ಇಂದಿನಿಂದ ನ. 20ರವರೆಗೆ ಸಪ್ತಾಹ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ, ಚಿತ್ರಕಲೆ ಸ್ಪರ್ಧೆ ಹಾಗೂ ಗ್ರಂಥಾಲಯ ಮಹತ್ವ ಕುರಿತು ಉಪನ್ಯಾಸ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುವುದು’ ಎಂದು ಹೇಳಿದರು.</p>.<p>ನಗರಸಭೆ ಉಪಾಧ್ಯಕ್ಷೆ ಲಲಿತಾ ನಾಯ್ಕ, ಸದಸ್ಯೆ ಸುಜಾತಾ ಶಿವಕುಮಾರ್, ಸ್ಪರ್ಧಾತ್ಮಕ ತರಬೇತಿ ಸಂಸ್ಥೆ ಮುಖ್ಯಸ್ಥ ತುಳಸಿದಾಸ್, ಗ್ರಂಥಾಲಯ ಸಿಬ್ಬಂದಿ ರಾಘವೇಂದ್ರ, ರೂಪಾ, ಶಂಕರೇಗೌಡ, ಸಿದ್ದೇಗೌಡ, ಸೌಮ್ಯಾ, ಕೃಪಾ, ಕೆ.ಬಿ.ವೀಣಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>