<p><strong>ಅಜ್ಜಂಪುರ</strong>: ಸಮೀಪದ ಅಂತರಘಟ್ಟೆ ಗ್ರಾಮದ ದುರ್ಗಾಂಬ ದೇವಿ ಜಾತ್ರಾ ಮಹೋತ್ಸವದಲ್ಲಿ ಸೇರುವ ರಾಸುಗಳಿಗೆ ಪ್ರಥಮ ಚಿಕಿತ್ಸೆ ಮತ್ತು ಭಕ್ತರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆಗೆ ಲಯನ್ಸ್ ಕ್ಲಬ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಂ. ಪ್ರಕಾಶ್ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಜಾತ್ರೆಗೆ ಸಾವಿರಾರು ಬಂಡಿಗಳು ಬರುತ್ತವೆ. ಲಕ್ಷಾಂತರ ಭಕ್ತರು ಸೇರುತ್ತಾರೆ. ರಾಸುಗಳು ಕೆಲವೊಮ್ಮೆ ಅನಾರೋಗ್ಯಕ್ಕೆ ಮತ್ತು ಅವಘಡಗಳಿಗೆ ತುತ್ತಾಗುತ್ತವೆ. ಇಂತಹ ರಾಸುಗಳಿಗೆ ಪಶುಸಂಗೋಪನಾ ಇಲಾಖೆ ಚಿಕಿತ್ಸೆ ನೀಡುತ್ತದೆ. ಕ್ಲಬ್ ವತಿಯಿಂದ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು.</p>.<p>ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಶಶಿಧರ್, ಸಂಚಾರಿ ಪ್ರಥಮ ಚಿಕಿತ್ಸಾ ವಾಹನ ಸನ್ನದ್ಧ ಸ್ಥಿತಿಯಲ್ಲಿರುತ್ತದೆ. ಮಾಹಿತಿ ಬಂದೊಡನೆ, ಅಗತ್ಯವಿರುವ ರಾಸುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದರು.</p>.<p>ಶುಕ್ರವಾರ ಸುಮಾರು 50ಕ್ಕೂ ಹೆಚ್ಚು ರಾಸುಗಳಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಪಶು ಚಿಕಿತ್ಸಕ ಗಿರೀಶ್, ಜಯಶ್ರೀ, ರವಿ, ಪುಟ್ಟಸ್ವಾಮಿ, ಪ್ರಭು, ರಮೇಶ್ ರಾಸುಗಳಿಗೆ ಚಿಕಿತ್ಸೆ ನೀಡಿದರು.</p>.<p>ಲಯನ್ಸ್ ಕ್ಲಬ್ ಉಪಾಧ್ಯಕ್ಷ ಶಿವಮೂರ್ತಿ, ಸದಸ್ಯ ಎಂ.ಕೃಷ್ಣಮೂರ್ತಿ,. ಮಂಜು ಎಂ.ಹೊಸಹಳ್ಳಿ, ಸತೀಶ್, ಸುರೇಶ್, ವಿಶ್ವನಾಥ, ಸಿದ್ದೇಗೌಡ, ನಾಗಭೂಷಣ್, ವಿಜಯಕುಮಾರಿ, ಮಾಲತಿ, ಇಂದ್ರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ</strong>: ಸಮೀಪದ ಅಂತರಘಟ್ಟೆ ಗ್ರಾಮದ ದುರ್ಗಾಂಬ ದೇವಿ ಜಾತ್ರಾ ಮಹೋತ್ಸವದಲ್ಲಿ ಸೇರುವ ರಾಸುಗಳಿಗೆ ಪ್ರಥಮ ಚಿಕಿತ್ಸೆ ಮತ್ತು ಭಕ್ತರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆಗೆ ಲಯನ್ಸ್ ಕ್ಲಬ್ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಂ. ಪ್ರಕಾಶ್ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ಜಾತ್ರೆಗೆ ಸಾವಿರಾರು ಬಂಡಿಗಳು ಬರುತ್ತವೆ. ಲಕ್ಷಾಂತರ ಭಕ್ತರು ಸೇರುತ್ತಾರೆ. ರಾಸುಗಳು ಕೆಲವೊಮ್ಮೆ ಅನಾರೋಗ್ಯಕ್ಕೆ ಮತ್ತು ಅವಘಡಗಳಿಗೆ ತುತ್ತಾಗುತ್ತವೆ. ಇಂತಹ ರಾಸುಗಳಿಗೆ ಪಶುಸಂಗೋಪನಾ ಇಲಾಖೆ ಚಿಕಿತ್ಸೆ ನೀಡುತ್ತದೆ. ಕ್ಲಬ್ ವತಿಯಿಂದ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು.</p>.<p>ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಶಶಿಧರ್, ಸಂಚಾರಿ ಪ್ರಥಮ ಚಿಕಿತ್ಸಾ ವಾಹನ ಸನ್ನದ್ಧ ಸ್ಥಿತಿಯಲ್ಲಿರುತ್ತದೆ. ಮಾಹಿತಿ ಬಂದೊಡನೆ, ಅಗತ್ಯವಿರುವ ರಾಸುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದರು.</p>.<p>ಶುಕ್ರವಾರ ಸುಮಾರು 50ಕ್ಕೂ ಹೆಚ್ಚು ರಾಸುಗಳಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಪಶು ಚಿಕಿತ್ಸಕ ಗಿರೀಶ್, ಜಯಶ್ರೀ, ರವಿ, ಪುಟ್ಟಸ್ವಾಮಿ, ಪ್ರಭು, ರಮೇಶ್ ರಾಸುಗಳಿಗೆ ಚಿಕಿತ್ಸೆ ನೀಡಿದರು.</p>.<p>ಲಯನ್ಸ್ ಕ್ಲಬ್ ಉಪಾಧ್ಯಕ್ಷ ಶಿವಮೂರ್ತಿ, ಸದಸ್ಯ ಎಂ.ಕೃಷ್ಣಮೂರ್ತಿ,. ಮಂಜು ಎಂ.ಹೊಸಹಳ್ಳಿ, ಸತೀಶ್, ಸುರೇಶ್, ವಿಶ್ವನಾಥ, ಸಿದ್ದೇಗೌಡ, ನಾಗಭೂಷಣ್, ವಿಜಯಕುಮಾರಿ, ಮಾಲತಿ, ಇಂದ್ರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>