<p><strong>ಚಿಕ್ಕಮಗಳೂರು: </strong>ಜಿಲ್ಲೆಯಲ್ಲಿ ಇದೇ 28ರ ಬೆಳಿಗ್ಗೆ 6 ಗಂಟೆವರೆಗೆ ಪೂರ್ಣ ಲಾಕ್ಡೌನ್ ಮುಂದುವರಿಯಲ್ಲಿದ್ದು, ತುಸು ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.</p>.<p>ನಾಲ್ಕು ದಿನಗಳಿಂದ ಪೂರ್ಣ ಲಾಕ್ಡೌನ್ಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕೋವಿಡ್ ಪ್ರಕರಣಗಳು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ, ಲಾಕ್ಡೌನ್ ಮುಂದುವರಿಸಿದರೆ ಪ್ರಕರಣಗಳ ಸಂಖ್ಯೆ ಇನ್ನಷ್ಟು ತಗ್ಗಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಮಾರ್ಪಾಡುಗಳು: ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಹಣ್ಣು, ತರಕಾರಿಗಳನ್ನು ತಳ್ಳುವ ಗಾಡಿ ಮತ್ತು ವಾಹನಗಳಲ್ಲಿ ಮಾರಾಟಕ್ಕೆ ಮಾಡಲು ಅವಕಾಶ ನೀಡಲಾಗಿದೆ. ದಿನಸಿ ಅಂಗಡಿಯವರು ಅಂಗಡಿಗಳನ್ನು ತೆರೆಯುವಂತಿಲ್ಲ, ಮನೆಗಳಿಗೆ ದಿನಸಿ ತಲುಪಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.</p>.<p>ಹೋಟೆಲ್ ರೆಸ್ಟೊರೆಂಟ್ಗಳವರು ತೆರೆಯುವಂತಿಲ್ಲ. ಆದರೆ, ಆಹಾರವನ್ನು ಮನೆಗೆ ತಲುಪಿಸಲು ಅವಕಾಶ ಇದೆ. ರಸಗೊಬ್ಬರು, ಬಿತ್ತನೆ ಬೀಜಗಳನ್ನು ಕೃಷಿಕರ ಮನೆ ಬಾಗಿಲಿಗೆ ತಲುಪಿಸಲು ಅವಕಾಶ ಇದೆ ಎಂದರು.</p>.<p>ಕೃಷಿ ಚಟುವಟಿಕೆ ಪ್ರದೇಶದಲ್ಲಿರುವ ಕಾರ್ಮಿಕರು ಕೃಷಿ ಚಟುವಟಿಕೆ ಕೆಲಸಗಳಲ್ಲಿ ತೊಡಗಿಕೊಳ್ಳಲು ಅವಕಾಶ ಇದೆ. ಆದರೆ, ಒಂದೆಡೆಯಿಂದ ಇನ್ನೊಂದೆಡೆ ವಾಹನಗಳಲ್ಲಿ ಸಾಗಲು ಅವಕಾಶ ಇಲ್ಲ. ಅದೇ ರೀತಿ ಕಾಮಗಾರಿ ಪ್ರದೇಶದಲ್ಲಿರುವ ಇರುವ ಕೆಲಸಗಳಲ್ಲಿ ತೊಡಗಿಕೊಳ್ಳಲು ಅವಕಾಶ ಇದೆ ಎಂದರು.</p>.<p>ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ. ಅದೇ ಅಂಗಡಿ, ಮಳಿಗೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಘಟಕಗಳು ತೆರೆಯಲು ಅವಕಾಶ ಇಲ್ಲ ಮೊದಲಾದ ನಿರ್ಬಂಧಗಳು ಮುಂದುವರಿಯಲಿವೆ. ಪೆಟ್ರೋಲ್ ಬಂಕ್, ಔಷಧಾಲಯ, ತುರ್ತುಸೇವೆಗಳಿಗೆ ಅವಕಾಶ ಇದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಜಿಲ್ಲೆಯಲ್ಲಿ ಇದೇ 28ರ ಬೆಳಿಗ್ಗೆ 6 ಗಂಟೆವರೆಗೆ ಪೂರ್ಣ ಲಾಕ್ಡೌನ್ ಮುಂದುವರಿಯಲ್ಲಿದ್ದು, ತುಸು ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.</p>.<p>ನಾಲ್ಕು ದಿನಗಳಿಂದ ಪೂರ್ಣ ಲಾಕ್ಡೌನ್ಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕೋವಿಡ್ ಪ್ರಕರಣಗಳು ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ, ಲಾಕ್ಡೌನ್ ಮುಂದುವರಿಸಿದರೆ ಪ್ರಕರಣಗಳ ಸಂಖ್ಯೆ ಇನ್ನಷ್ಟು ತಗ್ಗಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಮಾರ್ಪಾಡುಗಳು: ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಹಣ್ಣು, ತರಕಾರಿಗಳನ್ನು ತಳ್ಳುವ ಗಾಡಿ ಮತ್ತು ವಾಹನಗಳಲ್ಲಿ ಮಾರಾಟಕ್ಕೆ ಮಾಡಲು ಅವಕಾಶ ನೀಡಲಾಗಿದೆ. ದಿನಸಿ ಅಂಗಡಿಯವರು ಅಂಗಡಿಗಳನ್ನು ತೆರೆಯುವಂತಿಲ್ಲ, ಮನೆಗಳಿಗೆ ದಿನಸಿ ತಲುಪಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.</p>.<p>ಹೋಟೆಲ್ ರೆಸ್ಟೊರೆಂಟ್ಗಳವರು ತೆರೆಯುವಂತಿಲ್ಲ. ಆದರೆ, ಆಹಾರವನ್ನು ಮನೆಗೆ ತಲುಪಿಸಲು ಅವಕಾಶ ಇದೆ. ರಸಗೊಬ್ಬರು, ಬಿತ್ತನೆ ಬೀಜಗಳನ್ನು ಕೃಷಿಕರ ಮನೆ ಬಾಗಿಲಿಗೆ ತಲುಪಿಸಲು ಅವಕಾಶ ಇದೆ ಎಂದರು.</p>.<p>ಕೃಷಿ ಚಟುವಟಿಕೆ ಪ್ರದೇಶದಲ್ಲಿರುವ ಕಾರ್ಮಿಕರು ಕೃಷಿ ಚಟುವಟಿಕೆ ಕೆಲಸಗಳಲ್ಲಿ ತೊಡಗಿಕೊಳ್ಳಲು ಅವಕಾಶ ಇದೆ. ಆದರೆ, ಒಂದೆಡೆಯಿಂದ ಇನ್ನೊಂದೆಡೆ ವಾಹನಗಳಲ್ಲಿ ಸಾಗಲು ಅವಕಾಶ ಇಲ್ಲ. ಅದೇ ರೀತಿ ಕಾಮಗಾರಿ ಪ್ರದೇಶದಲ್ಲಿರುವ ಇರುವ ಕೆಲಸಗಳಲ್ಲಿ ತೊಡಗಿಕೊಳ್ಳಲು ಅವಕಾಶ ಇದೆ ಎಂದರು.</p>.<p>ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ. ಅದೇ ಅಂಗಡಿ, ಮಳಿಗೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಘಟಕಗಳು ತೆರೆಯಲು ಅವಕಾಶ ಇಲ್ಲ ಮೊದಲಾದ ನಿರ್ಬಂಧಗಳು ಮುಂದುವರಿಯಲಿವೆ. ಪೆಟ್ರೋಲ್ ಬಂಕ್, ಔಷಧಾಲಯ, ತುರ್ತುಸೇವೆಗಳಿಗೆ ಅವಕಾಶ ಇದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>