ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಪ್ರೇಮಿಗಳು ಆತ್ಮಹತ್ಯೆ

Last Updated 20 ಡಿಸೆಂಬರ್ 2022, 15:53 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನ ಆಲ್ದೂರು ಸಮೀಪ ಸತ್ತಿಹಳ್ಳಿ ಗುಲ್ಲನಪೇಟೆಯ ಜಮೀನಿನ ಬದಿಯ ಹಲಸಿನ ಮರಕ್ಕೆ ಪ್ರೇಮಿಗಳಿಬ್ಬರು ಮಂಗಳವಾರ ನೇಣು ಹಾಕಿಕೊಂಡಿದ್ದಾರೆ.

ಮಲ್ಲಂದೂರಿನ ಕಲ್ಲುಗುಡ್ಡೆಯ ದರ್ಶನ್‌ (21) ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಾನಬಾಳು ಗ್ರಾಮದ ಪೂರ್ವಿಕಾ (19) ಮೃತಪಟ್ಟವರು.

‘ದರ್ಶನ್‌ ತೋಟದ ಕೂಲಿಕಾರ. ಪೂರ್ವಿಕಾ ಮಂಗಳೂರಿನಲ್ಲಿ ಮೀನಿನ ಫ್ಯಾಕ್ಟರಿಯಲ್ಲಿ ಉದ್ಯೋಗಿ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ, ತನಿಖೆ ಆರಂಭಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಶವಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಆಲ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT