ಮಾಜಿ ಸಚಿವೆ ಬಿ.ಬಿ.ನಿಂಗಯ್ಯ ಮಾತನಾಡಿ, ‘ಈ ತಂಗುದಾಣ ಮೂಡಿಗೆರೆ ತಾಲ್ಲೂಕಿನ ಕೋಳುಗೂಡು, ಮಾಲಳ್ಳಿ, ನಂದಿಪುರಗುಡ್ಡೆ, ಇಂದ್ರವಳ್ಳಿ ಗ್ರಾಮ, ಚಿಕ್ಕಮಗಳೂರು ತಾಲ್ಲೂಕಿನ ಬಸ್ಕಲ್, ನರಡಿ, ಮಾಗೆಹಳ್ಳಿ, ಬೇಲೂರು ತಾಲ್ಲೂಕಿನ ಹಳೇಗೆಂಡೇಹಳ್ಳಿ, ವಾಟಗನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಪ್ರಯಾಣಿಕರು ಹಾಗೂ ಶಾಲೆ ಮಕ್ಕಳಿಗೆ ಆಶ್ರಯವಾಗಿದೆ. ಇದನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು’ ಮನವಿ ಮಾಡಿದರು.