<p>ಕೊಪ್ಪ: ಹಿರೇಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಲಕೊಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿ 169ರ ಪಕ್ಕದಲ್ಲಿರುವ ಸಾರ್ವಜನಿಕ ಬಸ್ ನಿಲ್ದಾಣ ಗಿಡಗಂಟಿಗಳಿಂದ ಆವೃತಗೊಂಡಿದ್ದು, ನಿರ್ವಹಣೆಯಿಲ್ಲದೆ ಸೊರಗಿದೆ.</p>.<p>ಈ ಭಾಗದಲ್ಲಿ ನೂರಾರು ಮಂದಿ ಬಸ್ ನಿಲ್ದಾಣವನ್ನು ಬಳಸುತ್ತಾರೆ. ಆದರೆ, ನಿರ್ವಹಣೆ ಕೊರತೆಯಿಂದ ಬಸ್ ನಿಲ್ದಾಣದ ಬದಲು ಮೋರಿ ಕಟ್ಟೆ ಮೇಲೆ ಕುಳಿತು ಬಸ್ಗಾಗಿ ಕಾಯುತ್ತಾರೆ. ಇದರಿಂದ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗಿದೆ. ಇದೀಗ ಮಳೆ ಶುರುವಾಗಿದ್ದು, ಕಳೆ ಗಿಡಗಳನ್ನು ತೆರವುಗೊಳಿಸದಿದ್ದರೆ ಜನರಿಗೆ ಸಮಸ್ಯೆಯಾಗಲಿದೆ.</p>.<p>ಬಸ್ ತಂಗುದಾಣವನ್ನು 2019- 20ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ ದುರಸ್ತಿಪಡಿಸಲಾಗಿದೆ. ಆ ಬಳಿಕ ಇಲ್ಲಿ ಸ್ವಚ್ಛತೆ ಕೆಲಸ ಮಾಡದೇ ಪಾಳು ಬಿಡುವಂತಾಗಿದೆ. ಸಂಬಂಧಿಸಿದ ಸ್ಥಳೀಯ ಪಂಚಾಯಿತಿ ಈ ಬಗ್ಗೆ ಗಮನ ಹರಿಸಿ, ಗಿಡಗಂಟಿಗಳ ತೆರವಿಗೆ ಕ್ರಮ ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-126-614123213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪ: ಹಿರೇಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಲಕೊಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿ 169ರ ಪಕ್ಕದಲ್ಲಿರುವ ಸಾರ್ವಜನಿಕ ಬಸ್ ನಿಲ್ದಾಣ ಗಿಡಗಂಟಿಗಳಿಂದ ಆವೃತಗೊಂಡಿದ್ದು, ನಿರ್ವಹಣೆಯಿಲ್ಲದೆ ಸೊರಗಿದೆ.</p>.<p>ಈ ಭಾಗದಲ್ಲಿ ನೂರಾರು ಮಂದಿ ಬಸ್ ನಿಲ್ದಾಣವನ್ನು ಬಳಸುತ್ತಾರೆ. ಆದರೆ, ನಿರ್ವಹಣೆ ಕೊರತೆಯಿಂದ ಬಸ್ ನಿಲ್ದಾಣದ ಬದಲು ಮೋರಿ ಕಟ್ಟೆ ಮೇಲೆ ಕುಳಿತು ಬಸ್ಗಾಗಿ ಕಾಯುತ್ತಾರೆ. ಇದರಿಂದ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗಿದೆ. ಇದೀಗ ಮಳೆ ಶುರುವಾಗಿದ್ದು, ಕಳೆ ಗಿಡಗಳನ್ನು ತೆರವುಗೊಳಿಸದಿದ್ದರೆ ಜನರಿಗೆ ಸಮಸ್ಯೆಯಾಗಲಿದೆ.</p>.<p>ಬಸ್ ತಂಗುದಾಣವನ್ನು 2019- 20ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ ದುರಸ್ತಿಪಡಿಸಲಾಗಿದೆ. ಆ ಬಳಿಕ ಇಲ್ಲಿ ಸ್ವಚ್ಛತೆ ಕೆಲಸ ಮಾಡದೇ ಪಾಳು ಬಿಡುವಂತಾಗಿದೆ. ಸಂಬಂಧಿಸಿದ ಸ್ಥಳೀಯ ಪಂಚಾಯಿತಿ ಈ ಬಗ್ಗೆ ಗಮನ ಹರಿಸಿ, ಗಿಡಗಂಟಿಗಳ ತೆರವಿಗೆ ಕ್ರಮ ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-126-614123213</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>