ತಾಲ್ಲೂಕಿನ ದೇವರುಂದ ಗ್ರಾಮದಲ್ಲಿರುವ ಪ್ರಸನ್ನ ರಾಮೇಶ್ವರ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಮೇಶ್ವರ ಸ್ವಾಮಿಗೆ ಹೂವಿನ ಅಲಂಕಾರ ಮಾಡಿ, ದೇವಾಲಯದಲ್ಲಿ ರುದ್ರಾಭಿಷೇಕ, ಹೋಮ ನಡೆಸಲಾಯಿತು. ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜಾಗರಣೆ ನಡೆಯಿತು. ಭೈರಾಪುರದ ನಾಣ್ಯ ಭೈರವೇಶ್ವರ, ಫಲ್ಗುಣಿ ಕಲಾನಾಥೇಶ್ವರ, ದೇವರಮನೆಯ ಕಾಲಭೈರವೇಶ್ವರ, ಕುಂದೂರು ಈಶ್ವರ, ತಳವಾರ ಈಶ್ವರ, ಕಾಲಭೈರವೇಶ್ವರ ದೇವಾಲಯಗಳಲ್ಲೂ ವಿಶೇಷ ಪೂಜೆಗಳು ನಡೆದವು. ಪಟ್ಟಣದ ಶನೇಶ್ವರ ದೇವಾಲಯ, ಅಯ್ಯಪ್ಪಸ್ವಾಮಿ ದೇವಾಲಯ, ವೇಣುಗೋಪಾಲಸ್ವಾಮಿ ದೇವಾಲಯಗಳಲ್ಲಿಯೂ ಹಬ್ಬದ ಅಂಗವಾಗಿ ವಿಶೇಷ ಪೂಜೆ ನಡಯಿತು. ದೇವಾಲಯಗಳಲ್ಲಿ ಭಕ್ತರಿಗೆ ಪಾನಕ, ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.