<p><strong>ಚಿಕ್ಕಮಗಳೂರು:</strong> ಜಿಲ್ಲೆಯಲ್ಲಿ ಮಲೆನಾಡು ಮೋಟಾರ್ ಡ್ರೈವಿಂಗ್ ಸ್ಕೂಲ್ ಸಂಘ ರಚಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಪಿ. ಸುರೇಶ್ ತಿಳಿಸಿದರು.</p>.<p>‘ಸಂಘದ ವತಿಯಿಂದ ಜ. 30ರಂದು ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಅಂದೇ ನಮ್ಮ ಎಲ್ಲಾ ಚಾಲನಾ ತರಬೇತಿ ಶಾಲೆಗಳ ಸಮ್ಮುಖದಲ್ಲಿ ಡಿ.ಟಿ. ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ರಸ್ತೆ ಸುರಕ್ಷತೆ ಬಗ್ಗೆ ಎಲ್ಲಾ ಶಾಲಾ– ಕಾಲೇಜುಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುವುದು. ರಕ್ತದಾನ ಶಿಬಿರ ಏರ್ಪಡಿಸಲಾಗುವುದು. ತರಬೇತಿ ಶಾಲೆಗಳಲ್ಲಿ ಉತ್ತಮವಾದ ಚಾಲನಾ ತರಬೇತಿ ನೀಡಲು ಸೂಕ್ತ ಸಲಹೆ ನೀಡುವುದು ಸಂಘದ ಧ್ಯೇಯ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಸುಮಾರು 42 ಚಾಲನಾ ತರಬೇತಿ ಶಾಲೆಗಳು ಮಾನ್ಯತೆ ಪಡೆದಿವೆ. ಜಿಲ್ಲೆಯಲ್ಲಿ ವೈಜ್ಞಾನಿಕವಾಗಿ ಸುಸಜ್ಜಿತ ಚಾಲನಾ ಪರೀಕ್ಷೆಗೆ ಪಥ ನಿರ್ಮಾಣ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.</p>.<p>ಸಂಘದ ಗೌರವ ಅಧ್ಯಕ್ಷರಾಗಿ ಕೆ.ಆರ್. ಅನಿಲ್ಕುಮಾರ್, ಎನ್.ಕೆ. ಸತ್ಯನಾಥ್, ನೂರುಲ್ಲಾ ಖಾನ್, ಬಲರಾಂ ನಾಯಕ್, ಉಪಾಧ್ಯಕ್ಷರಾಗಿ ತೀರ್ಥಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಚ್.ಪಿ. ಸುರೇಶ್, ಕಾರ್ಯಾಧ್ಯಕ್ಷ ಸುಧೀರ್, ಸಹ ಕಾರ್ಯದರ್ಶಿ ಇನಾಯತ್, ಖಜಾಂಚಿ ಜಯಲಕ್ಷ್ಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷ ಕೆ.ಆರ್. ಅನಿಲ್ಕುಮಾರ್, ಎನ್.ಕೆ. ಸತ್ಯನಾಥ್, ನೂರುಲ್ಲಾ ಖಾನ್, ತೀರ್ಥಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯಲ್ಲಿ ಮಲೆನಾಡು ಮೋಟಾರ್ ಡ್ರೈವಿಂಗ್ ಸ್ಕೂಲ್ ಸಂಘ ರಚಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಪಿ. ಸುರೇಶ್ ತಿಳಿಸಿದರು.</p>.<p>‘ಸಂಘದ ವತಿಯಿಂದ ಜ. 30ರಂದು ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಅಂದೇ ನಮ್ಮ ಎಲ್ಲಾ ಚಾಲನಾ ತರಬೇತಿ ಶಾಲೆಗಳ ಸಮ್ಮುಖದಲ್ಲಿ ಡಿ.ಟಿ. ಮಂಜುನಾಥ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ರಸ್ತೆ ಸುರಕ್ಷತೆ ಬಗ್ಗೆ ಎಲ್ಲಾ ಶಾಲಾ– ಕಾಲೇಜುಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುವುದು. ರಕ್ತದಾನ ಶಿಬಿರ ಏರ್ಪಡಿಸಲಾಗುವುದು. ತರಬೇತಿ ಶಾಲೆಗಳಲ್ಲಿ ಉತ್ತಮವಾದ ಚಾಲನಾ ತರಬೇತಿ ನೀಡಲು ಸೂಕ್ತ ಸಲಹೆ ನೀಡುವುದು ಸಂಘದ ಧ್ಯೇಯ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಸುಮಾರು 42 ಚಾಲನಾ ತರಬೇತಿ ಶಾಲೆಗಳು ಮಾನ್ಯತೆ ಪಡೆದಿವೆ. ಜಿಲ್ಲೆಯಲ್ಲಿ ವೈಜ್ಞಾನಿಕವಾಗಿ ಸುಸಜ್ಜಿತ ಚಾಲನಾ ಪರೀಕ್ಷೆಗೆ ಪಥ ನಿರ್ಮಾಣ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.</p>.<p>ಸಂಘದ ಗೌರವ ಅಧ್ಯಕ್ಷರಾಗಿ ಕೆ.ಆರ್. ಅನಿಲ್ಕುಮಾರ್, ಎನ್.ಕೆ. ಸತ್ಯನಾಥ್, ನೂರುಲ್ಲಾ ಖಾನ್, ಬಲರಾಂ ನಾಯಕ್, ಉಪಾಧ್ಯಕ್ಷರಾಗಿ ತೀರ್ಥಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಚ್.ಪಿ. ಸುರೇಶ್, ಕಾರ್ಯಾಧ್ಯಕ್ಷ ಸುಧೀರ್, ಸಹ ಕಾರ್ಯದರ್ಶಿ ಇನಾಯತ್, ಖಜಾಂಚಿ ಜಯಲಕ್ಷ್ಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷ ಕೆ.ಆರ್. ಅನಿಲ್ಕುಮಾರ್, ಎನ್.ಕೆ. ಸತ್ಯನಾಥ್, ನೂರುಲ್ಲಾ ಖಾನ್, ತೀರ್ಥಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>